ಕಾಂತಾರ ಸಿನಿಮಾ ವಿವಾದವಾದಾಗಲೂ ಕಿಶೋರ್ ಪ್ರತಿಕ್ರಿಯಿಸಿದ್ದರು. ನಂಬಿಕೆ ಇರಬೇಕು, ಆದರೆ, ಮೂಢನಂಬಿಕೆ ಇರಬಾರದು ಎಂದು ಹೇಳಿದ್ದರು. ಎಲ್ಲ ಒಳ್ಳೆಯ ಸಿನಿಮಾಗಳಂತೆ ಕಾಂತಾರ ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ. ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿ ಹೋದೀತು ಎಂದಿದ್ದರು.