ಚೆರುಕುರಿ ವೆಂಕಟ ಮೋಹನ್, ಡಾ.ವಿಜೇಂದ್ರ ರೆಡ್ಡಿ ಹಾಗೂ ಮೂರ್ತಿ ಕಲಗಾರ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಯುವ ಹಾಗೂ ಪ್ರತಿಭಾವಂತ ತಂತ್ರಜ್ಞರು ಈ ಚಿತ್ರದ ಭಾಗವಾಗಲಿದ್ದು, ಸಾನು ಜಾನ್ ವರ್ಗೀಸ್ ಕ್ಯಾಮೆರಾ ವರ್ಕ್ ಚಿತ್ರಕ್ಕಿರಲಿದೆ. ‘ಜೆರ್ಸಿ’, ‘ಶ್ಯಾಮ್ ಸಿಂಗ ರಾಯ್’ ಸಿನಿಮಾ ನಂತರ ನಾನಿ ಜೊತೆ ಇದು ಇವರ ಮೂರನೇ ಸಿನಿಮಾ. ‘ಹೃದಯಂ’ ಸಿನಿಮಾ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ, ಪ್ರವೀಣ್ ಆಂಥೋನಿ ಸಂಕಲನ ಚಿತ್ರಕ್ಕಿರಲಿದೆ.