ತ್ರಿಭಾಷಾ ಸೂತ್ರ ಪಾಲನೆಯ ಪರಿಣಾಮ ರಾಜ್ಯದ ಶಾಲಾ ಪಠ್ಯದಲ್ಲಿ ಹಿಂದಿ ಕಲಿಕೆಗೆ ಅವಕಾಶ ಸಿಕ್ಕಿದೆ. ಹಾಗಾಗಿ, ಪ್ರಾಥಮಿಕ ಶಾಲಾ ಹಂತದಲ್ಲಿಯೇ ಒಂದು ವಿಷಯವಾಗಿ ಮಕ್ಕಳಿಗೆ ಹಿಂದಿ ಕಲಿಸಲಾಗುತ್ತಿದೆ. ಮತ್ತೊಂದೆಡೆ ಬ್ಯಾಂಕಿಂಗ್ ವ್ಯವಹಾರ ಸೇರಿದಂತೆ ಹಲವು ವಿಷಯಗಳಲ್ಲಿ ಸದ್ದಿಲ್ಲದೇ ಹಿಂದಿ ಹೇರಿಕೆ ನಡೆಯುತ್ತಿದೆ. ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ನೀಡಬೇಕು ಎಂಬ ಕನ್ನಡಿಗರ ಕೂಗಿಗೆ ಬೆಲೆ ಸಿಕ್ಕಿಲ್ಲ. ಹಿಂದಿ ಹೇರಿಕೆಯನ್ನು ಕನ್ನಡಿಗರು ವಿರೋಧಿಸುತ್ತಲೇ ಬಂದಿದ್ದಾರೆ.