ಇವೆಲ್ಲವುಗಳ ನಡುವೆ ‘ಅಪ್ಪು’ವನ್ನು ಅಮರವಾಗಿಸುವ ಕಾರ್ಯಕ್ರಮಗಳನ್ನು ಅಭಿಮಾನಿಗಳು ಆಯೋಜಿಸುತ್ತಿದ್ದಾರೆ. ರಾಜ್ಯದ ಹಲವೆಡೆ ರಕ್ತದಾನ, ಅನ್ನದಾನವೇರ್ಪಡಿಸಿ, ನೇತ್ರದಾನದ ಪ್ರತಿಜ್ಞೆಯನ್ನು ಅಭಿಮಾನಿಗಳು ತೆಗೆದುಕೊಳ್ಳುತ್ತಿದ್ದಾರೆ. ಮಾರ್ಚ್ 17ರಂದು ಬಿಡುಗಡೆಯಾಗುತ್ತಿರುವ ‘ಕಬ್ಜ’ ಸಿನಿಮಾವನ್ನು ನಿರ್ದೇಶಕ ಆರ್.ಚಂದ್ರು ಅವರು ಪುನೀತ್ ರಾಜ್ಕುಮಾರ್ ಅವರಿಗೆ ಅರ್ಪಿಸಿದ್ದಾರೆ. ಜೊತೆಗೆ ಪಿಆರ್ಕೆ ಪ್ರೊಡಕ್ಷನ್ಸ್ನಡಿ, ಅಮೋಘವರ್ಷ ನಿರ್ದೇಶನದ ಪುನೀತ್ ಪಾಲ್ಗೊಂಡ ಡಾಕ್ಯೂಫಿಲಂ ‘ಗಂಧದಗುಡಿ’ ಇಂದು ಪ್ರೈಂ ವಿಡಿಯೊದಲ್ಲಿ ಸ್ಟ್ರೀಮ್ ಆಗಲಿದೆ. ಬೆಂಗಳೂರಿನ ಗಾಂಧಿನಗರದಲ್ಲಿರುವ ಸಂತೋಷ್ ಚಿತ್ರಮಂದಿರದಲ್ಲಿ ಅಪ್ಪು ಅಭಿನಯದ ‘ಯುವರತ್ನ’ ಸಿನಿಮಾ ರಿರಿಲೀಸ್ ಆಗುತ್ತಿದೆ.