ಈ ಕುರಿತು ಮಾತನಾಡಿದ ಪುನೀತ್ ರಾಜ್ಕುಮಾರ್ ಅಣ್ಣ, ನಟ ರಾಘವೇಂದ್ರ ರಾಜ್ಕುಮಾರ್, ‘ಮಂಗಳವಾರ ಹಾಲು–ತುಪ್ಪ ಬಿಡುವ ಕಾರ್ಯ ನಡೆಯಲಿದ್ದು, ಇದಾದ ಬಳಿಕ ಸಾರ್ವಜನಿಕರಿಗೆ ಕಂಠೀರವ ಸ್ಟುಡಿಯೊ ಒಳಗಡೆ ಪುನೀತ್ ಸಮಾಧಿ ನೋಡಲು ಅವಕಾಶ ನೀಡಲಾಗುವುದು. ಈ ಭಾರ ನಮ್ಮ ಕೊನೆಯವರೆಗೂ ಇರಲಿದೆ. ತಂದೆ ತಾಯಿಯನ್ನು ಇಷ್ಟಪಟ್ಟು ಅಪ್ಪು ಬೇಗ ಹೋಗಿದ್ದಾನೆ ಎನಿಸುತ್ತಿದೆ. ಅಭಿಮಾನಿಗಳ ಪ್ರೀತಿಗೆ ಏನೂ ಹೇಳಲು ಸಾಧ್ಯವಿಲ್ಲ. ಮೂರು ದಿನ ಕಳೆದರೂ ಲಕ್ಷಾಂತರ ಜನ ಇನ್ನೂ ಬರುತ್ತಿದ್ದಾರೆ.