<p><strong>ಚೆನ್ನೈ: </strong>ಪ್ರತಿಭಟನೆ ಮಾಡಿ ರಾಜಕೀಯಕ್ಕೆ ಬರುವಂತೆ ನನ್ನ ಮೇಲೆ ಒತ್ತಡ ಹೇರುವ ಮೂಲಕ ನನಗೆ ಪದೇ ಪದೇ ನೋವು ಕೊಡಬೇಕು ಎಂದು ನಟ ರಜನಿಕಾಂತ್ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.</p>.<p>ಈ ಹಿಂದೆ ಹೊಸ ಪಕ್ಷ ಸ್ಥಾಪಿಸುವ ಮೂಲಕ ರಾಜಕೀಯಕ್ಕೆ ಬರುವುದಾಗಿ ಹೇಳಿದ್ದ ರಜನಿಕಾಂತ್, ಆ ಬಳಿಕ ಆರೋಗ್ಯ ಹದ್ದಗೆಟ್ಟಿದ್ದರಿಂದ ರಾಜಕೀಯಕ್ಕೆ ಬರುವ ನಿರ್ಧಾರದಿಂದ ಹಿಂದೆ ಸರಿದಿದ್ದರು. ರಜನಿಯವರ ಈ ನಿರ್ಧಾರ ಸಹಜವಾಗಿಯೇ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ರಜನಿಕಾಂತ್ ತಮ್ಮ ನಿರ್ಧಾರ ಹಿಂಪಡೆದು ರಾಜಕೀಯಕ್ಕೆ ಬರಬೇಕೆಂದು ಒತ್ತಾಯಿಸಿ ಅಭಿಮಾನಿ ಸಂಘ ನಿನ್ನೆ ಪ್ರತಿಭಟನೆ ನಡೆಸಿತ್ತು.</p>.<p>ಅಭಿಮಾನಿಗಳ ಪ್ರತಿಭಟನೆ ಬಳಿಕ ಹೇಳಿಕೆ ಬಿಡುಗಡೆ ಮಾಡಿರುವ ರಜನಿಕಾಂತ್ ಪದೇ ಪದೇ ಪ್ರತಿಭಟನೆ ಮಾಡಿ ನನ್ನ ಮೇಲೆ ಒತ್ತಡ ಹಾಕುವ ಮೂಲಕ ನೋವು ಕೊಡಬೇಡಿ ಎಂದು ಮನವಿ ಮಾಡಿದ್ದಾರೆ. "ರಾಜಕೀಯಕ್ಕೆ ಬರಲು ಸಾಧ್ಯವಾಗದಿರುವ ನನ್ನ ಅಸಮರ್ಥತೆಯ ಕಾರಣಗಳನ್ನು ನಾನು ಈಗಾಗಲೇ ವಿವರಿಸಿದ್ದೇನೆ. ನನ್ನ ನಿರ್ಧಾರವನ್ನು ನಾನು ತಿಳಿಸಿದ್ದೇನೆ. ಆ ರೀತಿಯ ಪ್ರತಿಭಟನೆ ಆಯೋಜಿಸುವ ಮೂಲಕ ದಯವಿಟ್ಟು ಮತ್ತೆ ಮತ್ತೆ ರಾಜಕೀಯಕ್ಕೆ ಬನ್ನಿ ಎಂದು ಒತ್ತಾಯಿಸಿ ನನಗೆ ನೋವು ಕೊಡಬೇಡಿ," ಎಂದು ಮನವಿ ಮಾಡಿದ್ದಾರೆ.</p>.<p>ಪ್ರತಿಭಟನಾ ಕಾರ್ಯಕ್ರಮವನ್ನು ಶಿಸ್ತುಬದ್ಧ ಮತ್ತು ಘನತೆಯಿಂದ ನಡೆಸಿದ್ದಕ್ಕಾಗಿ ಧನ್ಯವಾದಗಳು" ಎಂದು ಅವರು ಇದೇ ಸಂದರ್ಭ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ಪ್ರತಿಭಟನೆ ಮಾಡಿ ರಾಜಕೀಯಕ್ಕೆ ಬರುವಂತೆ ನನ್ನ ಮೇಲೆ ಒತ್ತಡ ಹೇರುವ ಮೂಲಕ ನನಗೆ ಪದೇ ಪದೇ ನೋವು ಕೊಡಬೇಕು ಎಂದು ನಟ ರಜನಿಕಾಂತ್ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.</p>.<p>ಈ ಹಿಂದೆ ಹೊಸ ಪಕ್ಷ ಸ್ಥಾಪಿಸುವ ಮೂಲಕ ರಾಜಕೀಯಕ್ಕೆ ಬರುವುದಾಗಿ ಹೇಳಿದ್ದ ರಜನಿಕಾಂತ್, ಆ ಬಳಿಕ ಆರೋಗ್ಯ ಹದ್ದಗೆಟ್ಟಿದ್ದರಿಂದ ರಾಜಕೀಯಕ್ಕೆ ಬರುವ ನಿರ್ಧಾರದಿಂದ ಹಿಂದೆ ಸರಿದಿದ್ದರು. ರಜನಿಯವರ ಈ ನಿರ್ಧಾರ ಸಹಜವಾಗಿಯೇ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ರಜನಿಕಾಂತ್ ತಮ್ಮ ನಿರ್ಧಾರ ಹಿಂಪಡೆದು ರಾಜಕೀಯಕ್ಕೆ ಬರಬೇಕೆಂದು ಒತ್ತಾಯಿಸಿ ಅಭಿಮಾನಿ ಸಂಘ ನಿನ್ನೆ ಪ್ರತಿಭಟನೆ ನಡೆಸಿತ್ತು.</p>.<p>ಅಭಿಮಾನಿಗಳ ಪ್ರತಿಭಟನೆ ಬಳಿಕ ಹೇಳಿಕೆ ಬಿಡುಗಡೆ ಮಾಡಿರುವ ರಜನಿಕಾಂತ್ ಪದೇ ಪದೇ ಪ್ರತಿಭಟನೆ ಮಾಡಿ ನನ್ನ ಮೇಲೆ ಒತ್ತಡ ಹಾಕುವ ಮೂಲಕ ನೋವು ಕೊಡಬೇಡಿ ಎಂದು ಮನವಿ ಮಾಡಿದ್ದಾರೆ. "ರಾಜಕೀಯಕ್ಕೆ ಬರಲು ಸಾಧ್ಯವಾಗದಿರುವ ನನ್ನ ಅಸಮರ್ಥತೆಯ ಕಾರಣಗಳನ್ನು ನಾನು ಈಗಾಗಲೇ ವಿವರಿಸಿದ್ದೇನೆ. ನನ್ನ ನಿರ್ಧಾರವನ್ನು ನಾನು ತಿಳಿಸಿದ್ದೇನೆ. ಆ ರೀತಿಯ ಪ್ರತಿಭಟನೆ ಆಯೋಜಿಸುವ ಮೂಲಕ ದಯವಿಟ್ಟು ಮತ್ತೆ ಮತ್ತೆ ರಾಜಕೀಯಕ್ಕೆ ಬನ್ನಿ ಎಂದು ಒತ್ತಾಯಿಸಿ ನನಗೆ ನೋವು ಕೊಡಬೇಡಿ," ಎಂದು ಮನವಿ ಮಾಡಿದ್ದಾರೆ.</p>.<p>ಪ್ರತಿಭಟನಾ ಕಾರ್ಯಕ್ರಮವನ್ನು ಶಿಸ್ತುಬದ್ಧ ಮತ್ತು ಘನತೆಯಿಂದ ನಡೆಸಿದ್ದಕ್ಕಾಗಿ ಧನ್ಯವಾದಗಳು" ಎಂದು ಅವರು ಇದೇ ಸಂದರ್ಭ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>