ರಜನಿಕಾಂತ್ ಅವರಿಗೆ ಕರೆ ಮಾಡಿರುವ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರು ಆರೋಗ್ಯವನ್ನು ವಿಚಾರಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ. ಡಿ.13ರಿಂದ ಹೈದರಾಬಾದ್ನಲ್ಲೇ ತಮಿಳು ಚಿತ್ರ ‘ಅನ್ನಾತ್ತೆ’ ಚಿತ್ರೀಕರಣದಲ್ಲಿ ಅವರು ನಿರತರಾಗಿದ್ದರು. ಚಿತ್ರೀಕರಣ ಸ್ಥಳದಲ್ಲಿದ್ದ ನಾಲ್ವರು ಸಿಬ್ಬಂದಿಗೆ ಕೋವಿಡ್ ದೃಢಪಟ್ಟ ಕಾರಣ, ರಜನಿಕಾಂತ್ ಪ್ರತ್ಯೇಕ ವಾಸದಲ್ಲಿದ್ದರು. ಕೋವಿಡ್ ಪರೀಕ್ಷೆಗೆ ಒಳಪಟ್ಟ ಸಂದರ್ಭದಲ್ಲಿ ಅವರಿಗೆ ಸೋಂಕು ಇಲ್ಲದಿರುವುದು ದೃಢಪಟ್ಟಿತ್ತು.