‘ಸಾಹೂರಾವ್ ಶಿಂಧೆ' ಎಂಬ ಶ್ರೀಮಂತ ವ್ಯಕ್ತಿಯ ಸುತ್ತ ಬಯಲುಸೀಮೆಯ ಕಥೆ ಚಲಿಸುತ್ತದೆ. ಗಜೇಂದ್ರಗಡ ಕೋಟೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬೀಳಗಿ ಹಾಗೂ ಮುಂಬೈನಲ್ಲಿ ಚಿತ್ರೀಕರಣ ನಡೆದಿದೆ’ ಎಂದರು ವರುಣ್.ಸಂಯುಕ್ತ ಹೊರನಾಡು, ಯಶ್ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಭವಾನಿ ಪ್ರಕಾಶ್, ಲಕ್ಷ್ಮಿ ನಾಡಗೌಡರ್ ಸೇರಿದಂತೆ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ. ಸಿನಿಮಾಗೆ ಸುಜಯ್ ಕುಮಾರ್ ಬಾವಿಕಟ್ಟೆ ಛಾಯಾಗ್ರಹಣ, ಮಾನಸಾ ಹೊಳ್ಳ ಸಂಗೀತ ನಿರ್ದೇಶನವಿದೆ.