ಬೆಂಗಳೂರು: ಚಂದನವನದ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯದಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು, ಅವರಿಗೆ ಆಂತರಿಕ ರಕ್ತಸ್ರಾವ ಉಂಟಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸತ್ಯಜಿತ್ ಅವರಿಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಸಕ್ಕರೆ ಕಾಯಿಲೆ ಸಹಿತ ಇತರ ವಯೋಸಹಜ ಆರೋಗ್ಯ ಸಮಸ್ಯೆಗಳಿವೆ. ಈಗ ಅವರಿಗೆ ಜೀವರಕ್ಷಕದ ನೆರವು ನೀಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ಗ್ಯಾಂಗ್ರಿನ್ಗೆ ತುತ್ತಾಗಿದ್ದ ಅವರ ಒಂದು ಕಾಲನ್ನು ಕತ್ತರಿಸಲಾಗಿತ್ತು. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.