ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೂಟಿಂಗ್ ವೇಳೆ ನಟ ಶರಣ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Last Updated 26 ಸೆಪ್ಟೆಂಬರ್ 2020, 21:53 IST
ಅಕ್ಷರ ಗಾತ್ರ

ಬೆಂಗಳೂರು: ಸಿನಿಮಾ ಶೂಟಿಂಗ್ ವೇಳೆ ಅಸ್ವಸ್ಥರಾದ ನಟ ಶರಣ್ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಂಪಲ್‌ ಸುನಿ ನಿರ್ದೇಶನದ ‘ಅವತಾರ ಪುರುಷ’ ಚಿತ್ರದ ಚಿತ್ರೀಕರಣದಲ್ಲಿ ಶರಣ್‌ ಶನಿವಾರ ಬೆಳಿಗ್ಗೆ ಪಾಲ್ಗೊಂಡಿದ್ದರು. ಎಚ್‌ಎಂಟಿ ಕಾರ್ಖಾನೆ ಬಳಿ ಚಿತ್ರದ ಕೊನೆಯ‌ ಹಂತದ ಶೂಟಿಂಗ್‌ ನಡೆಯುತ್ತಿತ್ತು. ಸಾಹಸ ದೃಶ್ಯದ ವೇಳೆ ಅವರಿಗೆ‌ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಶರಣ್ ಅವರ ಸಹೋದರಿ ಹಾಗೂ‌ ನಟಿ ಶ್ರುತಿ ಅವರು ಆಸ್ಪತ್ರೆಗೆ ಭೇಟಿ‌ ನೀಡಿ ಸಹೋದರನ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.

‘ಹೊಟ್ಟೆನೋವಿನಿಂದ ಶರಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರಿಗೆ ಚಿಕಿತ್ಸೆ‌ ನೀಡಿದ್ದಾರೆ. ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.

‘ಹೊಟ್ಟೆನೋವು ಹೆಚ್ಚಾದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಕಿಡ್ನಿಸ್ಟೋನ್ಸ್‌ ಇರುವುದು ಪತ್ತೆಯಾಗಿದೆ. ಶರಣ್‌ಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ‘ಅವತಾರ ಪುರುಷ’ ಚಿತ್ರದ್ದು ಇನ್ನು ಹತ್ತು ದಿನಗಳ ಶೂಟಿಂಗ್‌ ಅಷ್ಟೇ ಬಾಕಿ ಉಳಿದಿದೆ’ ಎಂದು ನಿರ್ದೇಶಕ ಸಿಂಪಲ್ ಸುನಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT