ಮೈಸೂರು: ಇಲ್ಲಿನ ಮಹಿಳೆಯರ ಪುನರ್ವಸತಿ ಮತ್ತು ಅಭಿವೃದ್ಧಿ ಕೇಂದ್ರ ‘ಶಕ್ತಿಧಾಮ’ದಲ್ಲಿ ನಟ ಶಿವರಾಜಕುಮಾರ್ ಅವರು ಬುಧವಾರ ಗಣರಾಜ್ಯೋತ್ಸವದಲ್ಲಿ ಭಾಗಿಯಾಗಿ, ಧ್ವಜಾರೋಹಣ ನೆರವೇರಿಸಿದರು.
ಪತ್ನಿ ಗೀತಾ ಶಿವರಾಜಕುಮಾರ್ ಹಾಗೂ ನಟ ಗುರುದತ್ ಅವರೊಂದಿಗೆ ಇಲ್ಲಿಗೆ ಬಂದ ಅವರು ಮಕ್ಕಳೊಂದಿಗೆ ಕೆಲಕಾಲ ಸಂವಾದ ನಡೆಸಿದರು.
ಬಳಿಕ ಇಲ್ಲಿನ ಕುದುರೆಮಾಳದಲ್ಲಿ ನಡೆಯುತ್ತಿದ್ದ ಸಿನಿಮಾದ ಚಿತ್ರೀಕರಣವನ್ನು ಮಕ್ಕಳು ವೀಕ್ಷಿಸಿದರು.