<p><strong>ಬೆಂಗಳೂರು: </strong>ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೇಶದಾದ್ಯಂತ ನಡೆಸುತ್ತಿರುವ ಹೋರಾಟಕ್ಕೆ ಕನ್ನಡದ ಹಿರಿಯ ನಟ ಶಿವರಾಜ್ಕುಮಾರ್ ಅವರು ಬುಧವಾರ ಬೆಂಬಲ ಸೂಚಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/op-ed/editorial/listen-to-the-farmers-pleas-and-turn-away-the-anxiety-editorial-783111.html" target="_blank">ಸಂಪಾದಕೀಯ: ರೈತರ ಅಹವಾಲು ಆಲಿಸಿ ಆತಂಕ ದೂರ ಮಾಡಿ</a></p>.<p>ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮೂರು ಕಾಯ್ದೆಗಳ ಬಗ್ಗೆ ರೈತರಲ್ಲಿ ಅಸಮಾಧಾನ ಮೂಡಿದೆ. ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಪ್ರೋತ್ಸಾಹ ಮತ್ತು ನೆರವು) ಕಾಯ್ದೆ, ಬೆಲೆ ಖಾತರಿಗೆ ರೈತರ ಒಪ್ಪಿಗೆ (ಸಶಕ್ತೀಕರಣ ಮತ್ತು ರಕ್ಷಣೆ) ಕಾಯ್ದೆ ಮತ್ತು ಕೃಷಿ ಸೇವೆಗಳು ಮತ್ತು ಅಗತ್ಯ ವಸ್ತು ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ರೈತರು ರಾಷ್ಟ್ರ ರಾಜಧಾನಿ ದೆಹಲಿಯ ಹೊರ ವಲಯದಲ್ಲಿ ಕಳೆದ 13 ದಿನಗಳಿಂದ ಹೋರಾಟದಲ್ಲಿ ನಿರತರಾಗಿದ್ದಾರೆ. </p>.<p>ಇದೇ ಹಿನ್ನೆಲೆಯಲ್ಲಿ ಇಂದು (ಡಿ.8) ದೇಶವ್ಯಾಪಿ ಬಂದ್ಗೆ ದೇಶದ ರೈತ ಸಂಘಟನೆಗಳು ಕರೆ ನೀಡಿವೆ. ಇದೇ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ನಟ ಶಿವರಾಜ್ಕುಮಾರ್ 'ರೈತ ದೇಶದ ಬೆನ್ನೆಲುಬು, ರೈತ ಇದ್ರೇನೆ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ,' ಎಂದು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೇಶದಾದ್ಯಂತ ನಡೆಸುತ್ತಿರುವ ಹೋರಾಟಕ್ಕೆ ಕನ್ನಡದ ಹಿರಿಯ ನಟ ಶಿವರಾಜ್ಕುಮಾರ್ ಅವರು ಬುಧವಾರ ಬೆಂಬಲ ಸೂಚಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/op-ed/editorial/listen-to-the-farmers-pleas-and-turn-away-the-anxiety-editorial-783111.html" target="_blank">ಸಂಪಾದಕೀಯ: ರೈತರ ಅಹವಾಲು ಆಲಿಸಿ ಆತಂಕ ದೂರ ಮಾಡಿ</a></p>.<p>ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮೂರು ಕಾಯ್ದೆಗಳ ಬಗ್ಗೆ ರೈತರಲ್ಲಿ ಅಸಮಾಧಾನ ಮೂಡಿದೆ. ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಪ್ರೋತ್ಸಾಹ ಮತ್ತು ನೆರವು) ಕಾಯ್ದೆ, ಬೆಲೆ ಖಾತರಿಗೆ ರೈತರ ಒಪ್ಪಿಗೆ (ಸಶಕ್ತೀಕರಣ ಮತ್ತು ರಕ್ಷಣೆ) ಕಾಯ್ದೆ ಮತ್ತು ಕೃಷಿ ಸೇವೆಗಳು ಮತ್ತು ಅಗತ್ಯ ವಸ್ತು ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ರೈತರು ರಾಷ್ಟ್ರ ರಾಜಧಾನಿ ದೆಹಲಿಯ ಹೊರ ವಲಯದಲ್ಲಿ ಕಳೆದ 13 ದಿನಗಳಿಂದ ಹೋರಾಟದಲ್ಲಿ ನಿರತರಾಗಿದ್ದಾರೆ. </p>.<p>ಇದೇ ಹಿನ್ನೆಲೆಯಲ್ಲಿ ಇಂದು (ಡಿ.8) ದೇಶವ್ಯಾಪಿ ಬಂದ್ಗೆ ದೇಶದ ರೈತ ಸಂಘಟನೆಗಳು ಕರೆ ನೀಡಿವೆ. ಇದೇ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ನಟ ಶಿವರಾಜ್ಕುಮಾರ್ 'ರೈತ ದೇಶದ ಬೆನ್ನೆಲುಬು, ರೈತ ಇದ್ರೇನೆ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ,' ಎಂದು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>