ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧರಿಸಿದ ನಟ ಶ್ರೀಮುರಳಿ

Last Updated 16 ಡಿಸೆಂಬರ್ 2021, 11:37 IST
ಅಕ್ಷರ ಗಾತ್ರ

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಅವರ ನಿಧನದ ಆಘಾತದಿಂದ ಚಿತ್ರರಂಗ ಇನ್ನೂ ಹೊರಬಂದಿಲ್ಲ. ಪ್ರೀತಿಯ ಮಾಮನನ್ನು ಕಳೆದುಕೊಂಡಿರುವ ನಟ ಶ್ರೀಮುರಳಿ ಅವರೂ ಅಪ್ಪು ಅವರ ನೆನಪಿನಲ್ಲೇ ದಿನದೂಡುತ್ತಿದ್ದಾರೆ. ಈ ಕಾರಣದಿಂದಾಗಿಯೇ ಡಿ.17ರಂದು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಶ್ರೀಮುರಳಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ನನ್ನ ಪ್ರೀತಿಯ ಅಭಿಮಾನಿಗಳೇ. ಈ ಬಾರಿ ನಿಮ್ಮೊಂದಿಗೆ ನನ್ನ ಜನ್ಮದಿನವನ್ನು ಆಚರಿಸಿಕೊಳ್ಳಲಾಗುವುದಿಲ್ಲ. ಕಾರಣವೇನೆಂದು ನಿಮಗೆ ಗೊತ್ತಿರುವುದೆಂದು ಭಾವಿಸುವೆ. ನಾನು ಬೆಂಗಳೂರಿನಲ್ಲೂ ಇರುವುದಿಲ್ಲ. ಸದಾ ನಿಮ್ಮ ಪ್ರೀತಿ ಹಾಗು ಆಶೀರ್ವಾದವನ್ನು ಬಯಸುವ, ನಿಮ್ಮ, ಶ್ರೀಮುರಳಿ (ಅಭಿಮಾನಿಗಳ ಅಭಿಮಾನಿ)’ ಎಂದು ಉಲ್ಲೇಖಿಸಿದ್ದಾರೆ.

ಶ್ರೀಮುರಳಿ ನಟನೆಯ, ಮಹೇಶ್‌ ಕುಮಾರ್‌ ನಿರ್ದೇಶನದ ‘ಮದಗಜ’ ಚಿತ್ರವು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಶ್ರೀಮುರಳಿ ಸೇರಿದಂತೆ ಇಡೀ ಚಿತ್ರತಂಡವು ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT