ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಸ ದೃಶ್ಯ ಚಿತ್ರೀಕರಣದ ವೇಳೆ ನಟ ಶ್ರೀಮುರಳಿಗೆ ಗಾಯ

Last Updated 7 ಏಪ್ರಿಲ್ 2021, 12:32 IST
ಅಕ್ಷರ ಗಾತ್ರ

ಶೂಟಿಂಗ್‌ ವೇಳೆ ನಟ ಶ್ರೀ ಮುರಳಿ ಅವರ ಕಾಲಿಗೆ ಗಾಯವಾಗಿದೆ. ‘ಮದಗಜ’ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಘಟನೆ ನಡೆದಿದೆ. ಕಾಲಿನ ಮಂಡಿ ಚಿಪ್ಪಿಗೆ ಸ್ವಲ್ಪ ಹಾನಿಯಾಗಿದೆ ಎಂದು ಮುರಳಿ ಅವರ ಆಪ್ತರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಘಟನೆ ನಡೆದಿದೆ. ತಕ್ಷಣವೆ ಅವರನ್ನು ಸದಾಶಿವ ನಗರದ ಆಸ್ಪತ್ರೆಗೆ ದಾಖಲಿಸಲಾಯಿತು. ಎಂಆರ್‌ಐ ಸ್ಕ್ಯಾನಿಂಗ್‌ ನಡೆಸಲಾಗಿದೆ. ಸದ್ಯ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇನ್ನು 15 ದಿನಗಳಲ್ಲಿ ಅವರು ಶೂಟಿಂಗ್‌ಗೆ ಮರಳಲಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ಮದಗಜ ಕರ್ನಾಟಕ ಸೇರಿ ದೇಶ ಬೇರೆ ಬೇರೆ ಭಾಗಗಳಲ್ಲಿ ಶೂಟಿಂಗ್‌ ನಡೆದಿದೆ. ಕೆಲವು ಭಾಗಗಳ ಚಿತ್ರೀಕರಣ ಬಾಕಿ ಉಳಿದಿತ್ತು. ಫಸ್ಟ್‌ಲುಕ್‌ ಟೀಸರ್‌ ಈಗಾಗಲೇ ಬಿಡುಗಡೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT