ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ನಟ ರಜನಿಕಾಂತ್‌ಗೆ ಆಹ್ವಾನ

Published 2 ಜನವರಿ 2024, 13:38 IST
Last Updated 2 ಜನವರಿ 2024, 13:38 IST
ಅಕ್ಷರ ಗಾತ್ರ

ಚೆನ್ನೈ: ಹಿರಿಯ ನಟ ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರಿಗೆ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಿ ಆಮಂತ್ರಣ ಪತ್ರಿಕೆ ನೀಡಲಾಗಿದೆ.

ಬಿಜೆಪಿ ನಾಯಕ ರಾ.ಅರ್ಜುನಮೂರ್ತಿ ಅವರು ರಜನಿಕಾಂತ್‌ ಅವರನ್ನು ಭೇಟಿಯಾಗಿ ರಾಮಮಂದಿರ ಉದ್ಘಾಟನೆಗೆ ಆಹ್ವಾನಿಸಿದ ಕುರಿತ ಫೋಟೊಗಳನ್ನು ಹಂಚಿಕೊಂಡಿದ್ದಾರೆ. 

ಫೋಟೊದಲ್ಲಿ ರಜನಿಕಾಂತ್‌ ಮತ್ತು ಇತರ ನಾಯಕರು ಆಹ್ವಾನ ಪತ್ರಿಕೆಯನ್ನು ಹಿಡಿದು ನಿಂತಿರುವುದನ್ನು ಕಾಣಬಹುದು. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅರ್ಜುನಮೂರ್ತಿಯವರು, ‘ಇಂದಿನ ಕಾರ್ಯಕ್ರಮ ನನ್ನ ಜೀವನದ ಉತ್ತಮ ಅನುಭವ’ ಎಂದು ಬರೆದುಕೊಂಡಿದ್ದಾರೆ.

‘ನಮ್ಮ ಆತ್ಮೀಯ ನಾಯಕ ರಜನಿಕಾಂತ್‌ ಅವರನ್ನು ಅವರ ನಿವಾಸದಲ್ಲಿ RSS ಪದಾಧಿಕಾರಿಗಳೊಂದಿಗೆ ಭೇಟಿ ಮಾಡಿದೆ.

ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪರವಾಗಿ ಜನವರಿ 22 ರಂದು ಜರುಗಲಿರುವ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಅವರನ್ನು ಹಾಗೂ ಕುಟುಂಬವನ್ನು ಆಹ್ವಾನಿಸಿದ್ದು ನನಗೆ ತುಂಬಾ ಸಂತೋಷವಾಯಿತು’ ಎಂದು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT