ಮಾಧ್ಯಮ ಪ್ರತಿನಿಧಿಗಳ ಜೊತೆ ಭಾನುವಾರ ಬೆಳಿಗ್ಗೆ ಅನೌಪಚಾರಿಕವಾಗಿ ಮಾತನಾಡಿದ ಅವರು, ‘ಮೋದಿ ಒಂದು ಸಮುದಾಯದ ಮತಗಳನ್ನು ತಮ್ಮತ್ತ ಸೆಳೆಯುವ ಯತ್ನವಾಗಿ ಗೌಡರನ್ನು ಹೊಗಳಿದ್ದರು. ಆದರೆ, ಅದೇ ಸಂದರ್ಭದಲ್ಲಿ ಮುಸ್ಲಿಂ ಮತಗಳು ದೂರವಾಗಬಹುದೆಂಬ ಆತಂಕ ಜೆಡಿಎಸ್ನಲ್ಲಿ ಮೂಡಿರಬೇಕು. ಬಿಜೆಪಿ ಮತ್ತು ಜೆಡಿಎಸ್ನ ಹಿರಿಯ ನಾಯಕರು ಸಲಹೆ ನೀಡಿದ ತಕ್ಷಣವೇ ಮೋದಿ ತಮ್ಮ ಮಾತಿನ ವರಸೆ ಬದಲಿಸಿರಬೇಕು’ ಎಂದರು.