ಬೆಂಗಳೂರು: ತಮಿಳು ನಟ, ನಿರ್ಮಾಪಕ ವಿಶಾಲ್ ಅವರು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್ (CBFC) ವಿರುದ್ಧ ಲಂಚದ ಆರೋಪ ಮಾಡಿರುವ ಸುದ್ದಿ ಭಾರತೀಯ ಚಿತ್ರರಂಗದಲ್ಲಿ ಹೊಸ ಸಂಚಲನವನ್ನುಂಟು ಮಾಡಿದೆ.
ಏತನ್ಮಧ್ಯೆ ವಿಶಾಲ್ ಅವರ ಆರೋಪಕ್ಕೆ CBFC ಯ ಮಾತೃಸಂಸ್ಥೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಪ್ರತಿಕ್ರಿಯಿಸಿದ್ದು, ವಿಶಾಲ್ ಅವರು ಮಾಡಿರುವ ಆರೋಪ ದುರದೃಷ್ಟಕರವಾದದ್ದು ಎಂದಿದೆ.
ಸರ್ಕಾರವು ಲಂಚ, ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಹೊಂದಿದ್ದು, ಅಂತಹದ್ದು ಏನಾದರೂ ಕಂಡು ಬಂದರೆ ಸಂಬಂಧಿಸಿದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು X ನಲ್ಲಿ ಮಾಹಿತಿ ಹಂಚಿಕೊಂಡಿದೆ.
ವಿಶಾಲ್ ಅವರು ಮಾಡಿರುವ ಆರೋಪದ ಕುರಿತು ತನಿಖೆ ನಡೆಸಲು ಇಲಾಖೆ ಈಗಲೇ ಒಬ್ಬ ಹಿರಿಯ ಅಧಿಕಾರಿಯನ್ನು ಮುಂಬೈಗೆ ಕಳುಹಿಸಿ ಕೊಡಲಿದೆ. ಅವರು ತನಿಖೆ ನಡೆಸಲಿದ್ದಾರೆ. CBFC ನಲ್ಲಿ ಅಥವಾ CBFC ಹೆಸರಿನಲ್ಲಿ ಯಾರಾದರೂ ಕಿರಕುಳ ನೀಡಿದ್ದರೆ jsfilms.inb@nic.in ಗೆ ದೂರು ನೀಡಿ ಎಂದು ಭರವಸೆ ನೀಡಿದೆ.