ಮುಂಬೈನಲ್ಲಿ ನಡೆದ ಇಂಡಿಯಾ ಟುಡೇ ಕಾನ್ಕ್ಲೇವ್ 2022 ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಕಾಂತಾರ ಸಿನಿಮಾ ಕೂಡ ನನ್ನ ಸಿನಿಮಾನೇ. ಕನ್ನಡ ಸಿನಿಮಾ ಇಷ್ಟೊಂದು ಪ್ರಶಂಸೆಯಾಗುತ್ತಿದೆ. ಗರುಡ ಗಮನ ವೃಷಭ ವಾಹನ, ಚಾರ್ಲಿ 777 ಸಿನಿಮಾಗಳು ಗಡಿ ಮೀರಿ ನೋಡಲ್ಪಟ್ಟಿವೆ. ಕನ್ನಡ ಸಿನಿಮಾಗಳು ಇಂದು ಜಾಗತಿಕ ಮನ್ನಣೆ ಪಡೆಯುತ್ತಿವೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.