ಖ್ಯಾತ ನಟ, ದಿವಂಗತ ಸಾಹಸಸಿಂಹ ವಿಷ್ಣುವರ್ಧನ್ ಅವರ ಪತ್ರಿಮೆಯನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳಿಗೆ ನಟರಾದ ಕಿಚ್ಚ ಸುದೀಪ್ ಹಾಗೂ ದರ್ಶನ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಷ್ಣು ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು. ಈ ಘಟನೆಗೆ ಸಂಬಂಧಿಸಿ ವಿಷ್ಣು ಅಭಿಮಾನಿಗಳು ಆನ್ಲೈನ್ ಮೂಲಕ ಪ್ರತಿಭಟನೆ ಆರಂಭಿಸಿದ್ದಾರೆ. ಕನ್ನಡದ ಖ್ಯಾತ ನಟ–ನಟಿಯರು ಈ ಘಟನೆಯನ್ನು ಖಂಡಿಸಿದ್ದಾರೆ. ಸುದೀಪ್ ಹಾಗೂ ದರ್ಶನ್ ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಾಗೂ ಸ್ಟೇಟಸ್ ಹಂಚಿಕೊಂಡಿದ್ದಾರೆ.