<p>ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ ವ್ಯಕ್ತಿಯೊಬ್ಬರಿಗೆ ನಟಿ ಚೈತ್ರಾ ಆಚಾರ್ ಅವರು ತಕ್ಕ ಪಾಠ ಕಲಿಸಿದ್ದಾರೆ.</p><p>ಚೈತ್ರಾ ಅವರಿಗೆ ಮಹೇಶ್ ಹೊಸ್ಮನಿ ಎಂಬುವರು ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದರು. ಆ ವ್ಯಕ್ತಿಯ ಮೆಸೇಜ್ ಸ್ಕ್ರೀನ್ ಶಾರ್ಟ್ ತೆಗೆದ ಚೈತ್ರಾ , ‘ಈ ವ್ಯಕ್ತಿ ಪೊಲೀಸ್ ಇಲಾಖೆಗೆ ಸಂಬಂಧಿಸಿದವರೇ? ಇವರು ಕಾನೂನು ಪಾಲನೆ ಮಾಡುವ ಬದಲು, ನೈತಿಕ ಪೊಲೀಸ್ಗಿರಿ ಮಾಡುತ್ತಿರುವಂತೆ ಕಾಣುತ್ತಿದೆ. ದಯವಿಟ್ಟು ಈ ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳಿ’ ಎಂದು ಬರೆದು ಬೆಂಗಳೂರು ನಗರ ಪೊಲೀಸ್ರನ್ನು ಟ್ಯಾಗ್ ಮಾಡಿ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದರು.</p>.<p>ಅವರು ಇನ್ಸ್ಟಾಗ್ರಾಮ್ ಸ್ಟೋರಿ ಶೇರ್ ಮಾಡಿದ ಬೆನ್ನಲೇ ಆ ವ್ಯಕ್ತಿ, ‘ಕ್ಷಮಿಸಿ ಮೇಡಂ ಈ ರೀತಿ ಸಂದೇಶ ಕಳಿಸಿರುವುದಕ್ಕೆ ತಪ್ಪಾಯಿತು. ನಿಮ್ಮ ಹಿತ ದೃಷ್ಟಿಯಿಂದ ಹಾಗೆ ಕಳಿಸಿದೆ. ನಾನು ನಿಮ್ಮ ಅಭಿಮಾನಿ. ದಯಮಾಡಿ ಇದನ್ನು ಇನ್ಸ್ಟಾಗ್ರಾಮ್ ಸ್ಟೋರಿಯಿಂದ ಅಳಿಸಿ ಹಾಕಿ. ಇದು ನನ್ನ ವೃತ್ತಿ ಜೀವನಕ್ಕೆ ತೊಂದರೆಯಾಗುತ್ತದೆ’ ಎಂದು ಮತ್ತೆ ಸಂದೇಶ ಕಳಿಸಿದ್ದಾರೆ. </p><p>ಇದಕ್ಕೆ ಉತ್ತರಿಸಿದ ಚೈತ್ರಾ ಅವರು ನಮ್ಮ ವೃತ್ತಿ ಜೀವನದ ಬಗ್ಗೆ ಮಾತನಾಡುವಾಗ ನಾವು ಸುಮ್ಮನೆ ಇರಬೇಕು, ಆದರೆ ಅವರ ವಿಷಯ ಬಂದಾಗ ನಿಯಮಗಳು ಬದಲಾಗುತ್ತವೆಯೇ? ಎಂದು ಕೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ ವ್ಯಕ್ತಿಯೊಬ್ಬರಿಗೆ ನಟಿ ಚೈತ್ರಾ ಆಚಾರ್ ಅವರು ತಕ್ಕ ಪಾಠ ಕಲಿಸಿದ್ದಾರೆ.</p><p>ಚೈತ್ರಾ ಅವರಿಗೆ ಮಹೇಶ್ ಹೊಸ್ಮನಿ ಎಂಬುವರು ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದರು. ಆ ವ್ಯಕ್ತಿಯ ಮೆಸೇಜ್ ಸ್ಕ್ರೀನ್ ಶಾರ್ಟ್ ತೆಗೆದ ಚೈತ್ರಾ , ‘ಈ ವ್ಯಕ್ತಿ ಪೊಲೀಸ್ ಇಲಾಖೆಗೆ ಸಂಬಂಧಿಸಿದವರೇ? ಇವರು ಕಾನೂನು ಪಾಲನೆ ಮಾಡುವ ಬದಲು, ನೈತಿಕ ಪೊಲೀಸ್ಗಿರಿ ಮಾಡುತ್ತಿರುವಂತೆ ಕಾಣುತ್ತಿದೆ. ದಯವಿಟ್ಟು ಈ ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳಿ’ ಎಂದು ಬರೆದು ಬೆಂಗಳೂರು ನಗರ ಪೊಲೀಸ್ರನ್ನು ಟ್ಯಾಗ್ ಮಾಡಿ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದರು.</p>.<p>ಅವರು ಇನ್ಸ್ಟಾಗ್ರಾಮ್ ಸ್ಟೋರಿ ಶೇರ್ ಮಾಡಿದ ಬೆನ್ನಲೇ ಆ ವ್ಯಕ್ತಿ, ‘ಕ್ಷಮಿಸಿ ಮೇಡಂ ಈ ರೀತಿ ಸಂದೇಶ ಕಳಿಸಿರುವುದಕ್ಕೆ ತಪ್ಪಾಯಿತು. ನಿಮ್ಮ ಹಿತ ದೃಷ್ಟಿಯಿಂದ ಹಾಗೆ ಕಳಿಸಿದೆ. ನಾನು ನಿಮ್ಮ ಅಭಿಮಾನಿ. ದಯಮಾಡಿ ಇದನ್ನು ಇನ್ಸ್ಟಾಗ್ರಾಮ್ ಸ್ಟೋರಿಯಿಂದ ಅಳಿಸಿ ಹಾಕಿ. ಇದು ನನ್ನ ವೃತ್ತಿ ಜೀವನಕ್ಕೆ ತೊಂದರೆಯಾಗುತ್ತದೆ’ ಎಂದು ಮತ್ತೆ ಸಂದೇಶ ಕಳಿಸಿದ್ದಾರೆ. </p><p>ಇದಕ್ಕೆ ಉತ್ತರಿಸಿದ ಚೈತ್ರಾ ಅವರು ನಮ್ಮ ವೃತ್ತಿ ಜೀವನದ ಬಗ್ಗೆ ಮಾತನಾಡುವಾಗ ನಾವು ಸುಮ್ಮನೆ ಇರಬೇಕು, ಆದರೆ ಅವರ ವಿಷಯ ಬಂದಾಗ ನಿಯಮಗಳು ಬದಲಾಗುತ್ತವೆಯೇ? ಎಂದು ಕೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>