ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿಮಾನಿಯೊಬ್ಬರಿಗೆ ಎಚ್ಚರಿಕೆ ನೀಡಿದ ನಟಿ ನಯನತಾರಾ!

Last Updated 10 ಏಪ್ರಿಲ್ 2023, 11:37 IST
ಅಕ್ಷರ ಗಾತ್ರ

ಮುಂಬೈ; ನಟಿ ನಯನತಾರಾ ಹಾಗೂ ಪತಿ ವಿಘ್ನೇಶ್ ಶಿವನ್‌ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಭಿಮಾನಿಯೊಬ್ಬರ ವರ್ತನೆಯಿಂದ ನಟಿ ತಾಳ್ಮೆ ಕಳೆದುಕೊಂಡು ಮಾತನಾಡಿದ್ದಾರೆ.

ಇತ್ತೀಚಿಗೆ ಕುಂಭಕೋಣಂ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಪಂಗುನಿ ಉತಿರಮ್‌ ಹಬ್ಬದ ಸಂದರ್ಭದಲ್ಲಿ ಈ ದಂಪತಿ ಭಾಗಿಯಾಗಿದ್ದರು.

ಅಭಿಮಾನಿಗಳ ಗುಂಪು ಹೆಚ್ಚಾಗಿತ್ತು. ಅಭಿಮಾನಿಯೊಬ್ಬ ನಯನತಾರಾ ಅವರನ್ನು ಮೊಬೈಲ್‌ ಕ್ಯಾಮರಾದಲ್ಲಿ ಸೆರೆ ಹಿಡಿಯಲು ಪ್ರಯತ್ನಿಸಿದ್ದಾನೆ. ಈ ವೇಳೆ ತಾಳ್ಮೆ ಕಳೆದುಕೊಂಡ ನಟಿ ಮೊಬೈಲ್‌ ಫೋನ್‌ನನ್ನು ಒಡೆದು ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ವಿಘ್ನೇಶ್ ಮತ್ತು ನಯನತಾರಾ ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT