‘ಬೆಂಗಳೂರಿನಲ್ಲಿ ನಡೆಯುತ್ತಿರುವ ಅವ್ಯವಸ್ಥಿತ ಪದ್ಧತಿಗಳು, ಸಂಸ್ಕೃತಿಯ ಕಗ್ಗೊಲೆ, ದೌರ್ಜನ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಕಥಾಹಂದರ ಒಳಗೊಂಡ ಚಿತ್ರವಿದು. ವಾರಾಣಸಿಯಲ್ಲಿ ಚಿತ್ರೀಕರಿಸಲಾಗಿರುವ ಈ ಹಾಡು ಗಣರಾಜ್ಯೋತ್ಸವದಂದು ಬಿಡುಗಡೆಯಾಗಲಿದೆ. ಪ್ರೇಮಾ ಅವರು ಶೂಟಿಂಗ್ ವೇಳೆ ಹಾಡಿದ್ದನ್ನು ಕೇಳಿದ ಬಳಿಕ ಅವರ ಬಳಿಯೇ ಹಾಡಿಸಲು ನಿರ್ಧರಿಸಿದೆ’ ಎಂದರು ನಿರ್ದೇಶಕ ಮಂಜು ಮಸ್ಕಲ್ ಮಟ್ಟಿ.
ಈ ಗೀತೆಗೆ ವಿ.ನಾಗೇಂದ್ರಪ್ರಸಾದ್ ಅವರ ಸಾಹಿತ್ಯ, ಸ್ವರ ಸಂಯೋಜನೆ ಇದೆ. ಮನ್ವಂತರಿ ಮೂವಿ ಮೇಕರ್ಸ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಅರ್ಜುನ್ ದೇವ ಚಿತ್ರದ ನಾಯಕನಾಗಿ ನಟಿಸಿದ್ದು, ರಾಣಾ, ಇಮ್ರಾನ್ ಷರೀಫ್, ಆರ್ಯನ್, ಪ್ರತೀಕ್ ಗೌಡ ಉಳಿದ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.