ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ತಾಗಿದ್ದ ಪ್ರಕರಣ: ಕಾರ್ಮಿಕನನ್ನು ಮನೆಗೆ ಕರೆದು ಕ್ಷಮೆ ಕೇಳಿದ ರಚಿತಾ ರಾಮ್

Published 15 ಆಗಸ್ಟ್ 2023, 13:43 IST
Last Updated 15 ಆಗಸ್ಟ್ 2023, 13:43 IST
ಅಕ್ಷರ ಗಾತ್ರ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನಕ್ಕೆ ನಟಿ ರಚಿತಾ ರಾಮ್‌ ಸೋಮವಾರ ಆಗಮಿಸಿದ್ದರು. ಈ ವೇಳೆ ಅವರ ಕಾರು, ಸ್ವಚ್ಚತಾ ಕಾರ್ಮಿಕರೊಬ್ಬರಿಗೆ ತಾಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿರಲಿಲ್ಲ.

ಆದಾಗ್ಯೂ, ರಚಿತಾ ರಾಮ್‌ ಕಾರು ಕಾರ್ಮಿಕನಿಗೆ ಗುದ್ದಿದೆ ಎಂಬ ಹಲವು ಮಾಧ್ಯಮಗಳು ಸುದ್ದಿ ಪ್ರಕಟಿಸಿದ್ದವು.

ಲಾಲ್‌ಬಾಗ್‌ನಲ್ಲಿ ಕೆಲಸ ಮಾಡುವ ರಂಗಪ್ಪ ಎನ್ನುವವರಿಗೆ ರಚಿತಾ ಇದ್ದ ಕಾರು ತಾಗಿತ್ತು.

ಈ ಸಂಬಂಧ ಪ್ರತಿಕ್ರಿಯಿಸಿರುವ ನಟಿ ರಚಿತಾ ರಾಮ್‌, ಇದು ಆಕಸ್ಮಿಕವಾಗಿ ನಡೆದಿರುವ ಘಟನೆ. ಈ ವಿಚಾರ ಗಮನಕ್ಕೆ ಬಂದಿರಲಿಲ್ಲ ಎಂದಿದ್ದಾರೆ. ಅಷ್ಟಲ್ಲದೆ, ರಂಗಪ್ಪ ಅವರನ್ನು ತಮ್ಮ ಮನೆಗೆ ಕರೆದು ಕ್ಷಮೆ ಕೋರಿದ್ದಾರೆ. ಈ ಸಂದರ್ಭದ ವಿಡಿಯೊವನ್ನೂ ತಮ್ಮ ಇನ್‌ಸ್ಟಾಗ್ರಾಂ ಪುಟದಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೊದಲ್ಲಿ ರಂಗಪ್ಪ ಅವರಲ್ಲಿ ಕ್ಷಮೆ ಕೇಳುವ ರಚಿತಾ, ಇನ್ನುಮುಂದೆ ಹೀಗಾಗದಂತೆ ಎಚ್ಚರ ವಹಿಸುವುದಾಗಿ ತಿಳಿಸಿದ್ದಾರೆ.

ರಚಿತಾ ರಾಮ್ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT