ಇದರಲ್ಲಿ ವರ್ಗಾವಣೆ ನಿರೀಕ್ಷೆ ಮಾಡಿದ್ರಾ ಎನ್ನುವ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿರುವ ರೋಹಿಣಿ ಸಿಂಧೂರಿ, ‘ಇಲ್ಲ, ನಿರೀಕ್ಷೆ ಮಾಡಿರಲಿಲ್ಲ. ಎಂಟು ತಿಂಗಳಲ್ಲಿ ಒಳ್ಳೆಯ ಕೆಲಸ ಮಾಡುತ್ತಿರುವಾಗ, ಕೋವಿಡ್ ಪ್ರಕರಣಗಳು ಇಳಿಕೆಯಾಗುತ್ತಿರುವಾಗ, ರಾಜ್ಯದಲ್ಲೇ ಅತಿ ಹೆಚ್ಚು ಲಸಿಕೆಯನ್ನು ನೀಡಿರುವಾಗ, ತಾಲ್ಲೂಕು ಮಟ್ಟದಲ್ಲಿ ಒಳ್ಳೆಯ ಕೆಲಸವಾಗುತ್ತಿರುವಾಗ, ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿರುವಾಗ ವರ್ಗಾವಣೆ ನಿರೀಕ್ಷೆ ಮಾಡಿರಲಿಲ್ಲ’ ಎಂದಿದ್ದಾರೆ.