‘ಈಗಿನ ಸ್ಥಿತಿಗೆ ಕೊರೊನಾ ಸೋಂಕು ಕಾರಣವಲ್ಲ ಬದಲಾಗಿ ಸರ್ಕಾರದ ಕಾರ್ಯವೈಖರಿಯೇ ಕಾರಣ. ಕಳೆದ ಬಾರಿ ಜಾರಿಗೊಳಿಸಿದ ಲಾಕ್ಡೌನ್, ಆರ್ಥಿಕತೆಯನ್ನು ದುರ್ಬಲಗೊಳಿಸಿದ್ದಲ್ಲದೇ, ಲಕ್ಷಾಂತರ ಜನರನ್ನು ಬಡತನ ಮತ್ತು ಹಸಿವಿನ ಕೂಪಕ್ಕೆ ನೂಕಿತ್ತು. ಆದರೆ ಕೋವಿಡ್ ನಿಯಂತ್ರಣ ಸಾಧ್ಯವಾಗಿರಲಿಲ್ಲ. ಇವರೆಡರ ಪರಿಣಾಮದ ನಡುವೆ ಭಾರತವು ಸಿಲುಕಿದ್ದು, ಅತ್ತ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ, ಇತ್ತ ಆರ್ಥಿಕತೆಯೂ ಕುಸಿದಿದೆ. ನಿರುದ್ಯೋಗ ಸಮಸ್ಯೆ, ಜನಜೀವನವೇ ಅಸ್ತವ್ಯಸ್ಥವಾಗಿದೆ. ಬಿಜೆಪಿ ಬೆಂಬಲಿಗರು ಬುದ್ಧಿಹೀನರಂತೆ ಕಾನೂನು ಹಾಗೂ ಹಕ್ಕುಗಳ ಬಗ್ಗೆ ಅಜ್ಞಾನಿಗಳಾಗಿದ್ದಾರೆ’ ಎಂದು ಉಲ್ಲೇಖಿಸಿದ್ದಾರೆ.