<p><strong>ಬೆಂಗಳೂರು</strong>: ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಕುರಿತಂತೆ ಭಾವಾನಾತ್ಮಕ ಪೋಸ್ಟ್ ಹಂಚಿಕೊಂಡಿರುವ ನಟಿ, ಮಾಜಿ ಸಂಸದೆ ರಮ್ಯಾ, ‘ನಿಮ್ಮಂತೆ ಮತ್ತೊಬ್ಬರು ಇರಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.</p><p>ಮಂಗಳವಾರ ಸದಾಶಿವನಗರದಲ್ಲಿ ಅಂತಿಮ ದರ್ಶನ ಪಡೆದಿದ್ದ ರಮ್ಯಾ, ತಮ್ಮ ರಾಜಕೀಯ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರ ಬಗ್ಗೆ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಳ್ಳುವ ಮೂಲಕ ಕಂಬನಿ ಮಿಡಿದಿದ್ದಾರೆ.</p><p>‘ಅವರು(ಎಸ್.ಎಂ.ಕೃಷ್ಣ) ಒಬ್ಬ ಸಾಮಾನ್ಯ ರಾಜಕಾರಣಿಯಾಗಿರದೇ ಸಮರ್ಥ ಗೌರವಾನ್ವಿತ ರಾಜಕಾರಣಿಯಾಗಿದ್ದರು. ಅವರು ತಮ್ಮ ವಿರೋಧಿಗಳು ಸೇರಿದಂತೆ ಯಾರ ಬಗ್ಗೆಯೂ ಕೆಟ್ಟದಾಗಿ ಮಾತಾಡಿಲ್ಲ. ದಾರ್ಶನಿಕ, ವಾಗ್ಮಿ, ಕರುಣಾಮಯಿ, ಪುಸ್ತಕ ಪ್ರೇಮಿ, ಹಾಸ್ಯ ವ್ಯಕ್ತಿತ್ವದ ನಿಮ್ಮಂತೆ ಮತ್ತೊಬ್ಬರು ಇರಲು ಸಾಧ್ಯವಿಲ್ಲ. ಧನ್ಯಾವಾದಗಳು’ ಎಂದು ಬರೆದುಕೊಂಡಿದ್ದಾರೆ.</p>.<p>ಮಂಗಳವಾರ (ಡಿ.10) ಸದಾಶಿವನಗರದ ಸ್ವಗೃಹದಲ್ಲಿ ಎಸ್.ಎಂ.ಕೃಷ್ಣ ಅವರು ನಿಧನ ಹೊಂದಿದ್ದರು. ಬುಧವಾರ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಿತು.</p><p>2013ರಲ್ಲಿ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ವಿರುದ್ಧ ಸ್ಪರ್ಧಿಸಿದ್ದ ರಮ್ಯಾ, 67,611 ಮತಗಳ ಅಂತರದಿಂದ ಭರ್ಜರಿ ಗೆಲವು ಸಾಧಿಸಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಕಣಕ್ಕಿಳಿದಿದ್ದ ರಮ್ಯಾ, ಸಿ.ಎಸ್.ಪುಟ್ಟರಾಜು ವಿರುದ್ಧವೇ ಸೋಲೊಪ್ಪಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಕುರಿತಂತೆ ಭಾವಾನಾತ್ಮಕ ಪೋಸ್ಟ್ ಹಂಚಿಕೊಂಡಿರುವ ನಟಿ, ಮಾಜಿ ಸಂಸದೆ ರಮ್ಯಾ, ‘ನಿಮ್ಮಂತೆ ಮತ್ತೊಬ್ಬರು ಇರಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.</p><p>ಮಂಗಳವಾರ ಸದಾಶಿವನಗರದಲ್ಲಿ ಅಂತಿಮ ದರ್ಶನ ಪಡೆದಿದ್ದ ರಮ್ಯಾ, ತಮ್ಮ ರಾಜಕೀಯ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರ ಬಗ್ಗೆ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಳ್ಳುವ ಮೂಲಕ ಕಂಬನಿ ಮಿಡಿದಿದ್ದಾರೆ.</p><p>‘ಅವರು(ಎಸ್.ಎಂ.ಕೃಷ್ಣ) ಒಬ್ಬ ಸಾಮಾನ್ಯ ರಾಜಕಾರಣಿಯಾಗಿರದೇ ಸಮರ್ಥ ಗೌರವಾನ್ವಿತ ರಾಜಕಾರಣಿಯಾಗಿದ್ದರು. ಅವರು ತಮ್ಮ ವಿರೋಧಿಗಳು ಸೇರಿದಂತೆ ಯಾರ ಬಗ್ಗೆಯೂ ಕೆಟ್ಟದಾಗಿ ಮಾತಾಡಿಲ್ಲ. ದಾರ್ಶನಿಕ, ವಾಗ್ಮಿ, ಕರುಣಾಮಯಿ, ಪುಸ್ತಕ ಪ್ರೇಮಿ, ಹಾಸ್ಯ ವ್ಯಕ್ತಿತ್ವದ ನಿಮ್ಮಂತೆ ಮತ್ತೊಬ್ಬರು ಇರಲು ಸಾಧ್ಯವಿಲ್ಲ. ಧನ್ಯಾವಾದಗಳು’ ಎಂದು ಬರೆದುಕೊಂಡಿದ್ದಾರೆ.</p>.<p>ಮಂಗಳವಾರ (ಡಿ.10) ಸದಾಶಿವನಗರದ ಸ್ವಗೃಹದಲ್ಲಿ ಎಸ್.ಎಂ.ಕೃಷ್ಣ ಅವರು ನಿಧನ ಹೊಂದಿದ್ದರು. ಬುಧವಾರ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಿತು.</p><p>2013ರಲ್ಲಿ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ವಿರುದ್ಧ ಸ್ಪರ್ಧಿಸಿದ್ದ ರಮ್ಯಾ, 67,611 ಮತಗಳ ಅಂತರದಿಂದ ಭರ್ಜರಿ ಗೆಲವು ಸಾಧಿಸಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಕಣಕ್ಕಿಳಿದಿದ್ದ ರಮ್ಯಾ, ಸಿ.ಎಸ್.ಪುಟ್ಟರಾಜು ವಿರುದ್ಧವೇ ಸೋಲೊಪ್ಪಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>