<p>ದಿನೇಶ್ ಬಾಬು ನಿರ್ದೇಶನದ ಐವತ್ತನೇ ಚಿತ್ರದ ಹೆಸರು ‘ಕಸ್ತೂರಿ ಮಹಲ್’. ಅವರೇ ಇದರ ಕಥೆ, ಚಿತ್ರಕಥೆ, ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ. ಇತ್ತೀಚೆಗೆ ಇದರ ಮುಹೂರ್ತವೂ ನೆರವೇರಿತ್ತು.</p>.<p>‘ಡಿಂಪಲ್ ಕ್ವೀನ್’ ರಚಿತಾ ರಾಮ್ ಇದರಲ್ಲಿ ನಟಿಸಲಿದ್ದಾರೆ ಎಂದು ಘೋಷಿಸಲಾಗಿತ್ತು. ಆದರೆ, ಹಲವು ಸಿನಿಮಾಗಳಲ್ಲಿ ಆಕೆ ನಟಿಸುತ್ತಿದ್ದಾರೆ. ಹಾಗಾಗಿ, ಸಮಯದ ಹೊಂದಾಣಿಕೆಯ ಕೊರತೆ ಪರಿಣಾಮ ಅವರು ಈ ಚಿತ್ರದಿಂದ ಹೊರ ನಡೆದಿದ್ದಾರೆ. ಈಗ ಅವರ ಪಾತ್ರದಲ್ಲಿ ಶಾನ್ವಿ ಶ್ರೀವಾಸ್ತವ ನಟಿಸಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.</p>.<p>ಈ ಚಿತ್ರಕ್ಕೆ ‘ಕಸ್ತೂರಿ ನಿವಾಸ’ ಎಂಬ ಟೈಟಲ್ ಇಡಲಾಗಿತ್ತು. ಇದಕ್ಕೆ ವರನಟ ರಾಜ್ಕುಮಾರ್ ಅಭಿಮಾನಿಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಜನಮಾನಸದಲ್ಲಿ ಇಂದಿಗೂ ಅಚ್ಚಳಿಯದೆ ಉಳಿದಿರುವ ಚಿತ್ರದ ಶೀರ್ಷಿಕೆಯನ್ನು ಮರುಬಳಕೆ ಮಾಡಬಾರದು ಎಂದು ಒತ್ತಾಯಿಸಿದ್ದರು. ಹಾಗಾಗಿ, ಚಿತ್ರತಂಡ ‘ಕಸ್ತೂರಿ ಮಹಲ್’ ಎಂದು ಟೈಟಲ್ ಬದಲಾಯಿಸಿತ್ತು.</p>.<p>ಅಕ್ಟೋಬರ್ 5ರಿಂದ ಕೊಟ್ಟಿಗೆಹಾರದ ಸುತ್ತಮುತ್ತ ಇದರ ಮೊದಲ ಹಂತದ ಶೂಟಿಂಗ್ ಆರಂಭವಾಗಲಿದೆ. ಹಾರರ್, ಥ್ರಿಲ್ಲರ್ ಚಿತ್ರ ಇದಾಗಿದೆ. ಪಿ.ಕೆ.ಹೆಚ್. ದಾಸ್ ಛಾಯಾಗ್ರಹಣದ ಹೊಣೆ ಹೊತ್ತಿದ್ದಾರೆ. ಸೌಂದರ್ ರಾಜ್ ಸಂಕಲನ ನಿರ್ವಹಿಸಲಿದ್ದಾರೆ. ಸ್ಕಂದ ಅಶೋಕ್, ರಂಗಾಯಣ ರಘು, ನಾರಾಯಣ ಸ್ವಾಮಿ ತಾರಾಗಣದಲ್ಲಿ ಇದ್ದಾರೆ.</p>.<p>ಪ್ರಸ್ತುತ ಶಾನ್ವಿ ‘ತ್ರಿಶೂಲಂ’ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಓಂ ಪ್ರಕಾಶ್ ರಾವ್ ನಿರ್ದೇಶನದ ಇದರಲ್ಲಿ ಉಪೇಂದ್ರ ಮತ್ತು ರವಿಚಂದ್ರನ್ ಮೊದಲ ಬಾರಿಗೆ ಒಟ್ಟಾಗಿ ನಟಿಸುತ್ತಿದ್ದಾರೆ. ಇದು ತೆಲುಗಿನ ‘ಬಲುಪು’ ಚಿತ್ರದ ರಿಮೇಕ್. ರೊಮ್ಯಾಂಟಿಕ್ ಆ್ಯಕ್ಷನ್ ಚಿತ್ರ ಇದಾಗಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಿನೇಶ್ ಬಾಬು ನಿರ್ದೇಶನದ ಐವತ್ತನೇ ಚಿತ್ರದ ಹೆಸರು ‘ಕಸ್ತೂರಿ ಮಹಲ್’. ಅವರೇ ಇದರ ಕಥೆ, ಚಿತ್ರಕಥೆ, ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ. ಇತ್ತೀಚೆಗೆ ಇದರ ಮುಹೂರ್ತವೂ ನೆರವೇರಿತ್ತು.</p>.<p>‘ಡಿಂಪಲ್ ಕ್ವೀನ್’ ರಚಿತಾ ರಾಮ್ ಇದರಲ್ಲಿ ನಟಿಸಲಿದ್ದಾರೆ ಎಂದು ಘೋಷಿಸಲಾಗಿತ್ತು. ಆದರೆ, ಹಲವು ಸಿನಿಮಾಗಳಲ್ಲಿ ಆಕೆ ನಟಿಸುತ್ತಿದ್ದಾರೆ. ಹಾಗಾಗಿ, ಸಮಯದ ಹೊಂದಾಣಿಕೆಯ ಕೊರತೆ ಪರಿಣಾಮ ಅವರು ಈ ಚಿತ್ರದಿಂದ ಹೊರ ನಡೆದಿದ್ದಾರೆ. ಈಗ ಅವರ ಪಾತ್ರದಲ್ಲಿ ಶಾನ್ವಿ ಶ್ರೀವಾಸ್ತವ ನಟಿಸಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.</p>.<p>ಈ ಚಿತ್ರಕ್ಕೆ ‘ಕಸ್ತೂರಿ ನಿವಾಸ’ ಎಂಬ ಟೈಟಲ್ ಇಡಲಾಗಿತ್ತು. ಇದಕ್ಕೆ ವರನಟ ರಾಜ್ಕುಮಾರ್ ಅಭಿಮಾನಿಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಜನಮಾನಸದಲ್ಲಿ ಇಂದಿಗೂ ಅಚ್ಚಳಿಯದೆ ಉಳಿದಿರುವ ಚಿತ್ರದ ಶೀರ್ಷಿಕೆಯನ್ನು ಮರುಬಳಕೆ ಮಾಡಬಾರದು ಎಂದು ಒತ್ತಾಯಿಸಿದ್ದರು. ಹಾಗಾಗಿ, ಚಿತ್ರತಂಡ ‘ಕಸ್ತೂರಿ ಮಹಲ್’ ಎಂದು ಟೈಟಲ್ ಬದಲಾಯಿಸಿತ್ತು.</p>.<p>ಅಕ್ಟೋಬರ್ 5ರಿಂದ ಕೊಟ್ಟಿಗೆಹಾರದ ಸುತ್ತಮುತ್ತ ಇದರ ಮೊದಲ ಹಂತದ ಶೂಟಿಂಗ್ ಆರಂಭವಾಗಲಿದೆ. ಹಾರರ್, ಥ್ರಿಲ್ಲರ್ ಚಿತ್ರ ಇದಾಗಿದೆ. ಪಿ.ಕೆ.ಹೆಚ್. ದಾಸ್ ಛಾಯಾಗ್ರಹಣದ ಹೊಣೆ ಹೊತ್ತಿದ್ದಾರೆ. ಸೌಂದರ್ ರಾಜ್ ಸಂಕಲನ ನಿರ್ವಹಿಸಲಿದ್ದಾರೆ. ಸ್ಕಂದ ಅಶೋಕ್, ರಂಗಾಯಣ ರಘು, ನಾರಾಯಣ ಸ್ವಾಮಿ ತಾರಾಗಣದಲ್ಲಿ ಇದ್ದಾರೆ.</p>.<p>ಪ್ರಸ್ತುತ ಶಾನ್ವಿ ‘ತ್ರಿಶೂಲಂ’ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಓಂ ಪ್ರಕಾಶ್ ರಾವ್ ನಿರ್ದೇಶನದ ಇದರಲ್ಲಿ ಉಪೇಂದ್ರ ಮತ್ತು ರವಿಚಂದ್ರನ್ ಮೊದಲ ಬಾರಿಗೆ ಒಟ್ಟಾಗಿ ನಟಿಸುತ್ತಿದ್ದಾರೆ. ಇದು ತೆಲುಗಿನ ‘ಬಲುಪು’ ಚಿತ್ರದ ರಿಮೇಕ್. ರೊಮ್ಯಾಂಟಿಕ್ ಆ್ಯಕ್ಷನ್ ಚಿತ್ರ ಇದಾಗಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>