<p>‘ಡ್ರಾಮಾ’ ಚಿತ್ರದಲ್ಲಿ ‘ಚಂದ್ರಿಕಾ’ ಪಾತ್ರದ ಮೂಲಕ ಗಮನ ಸೆಳೆದ ನಟಿ ಸಿಂಧು ಲೋಕನಾಥ್ ಅವರು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. </p><p>ಈ ಕುರಿತು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. </p><p>ದೇವಾಲಯದ ಕಲಾಕೃತಿಯನ್ನು ವೀಕ್ಷಿಸಿದ ಸಿಂಧು, ‘ಚಿತ್ರಗಳು ನ್ಯಾಯ ಹೊಂದಿಸುವುದಿಲ್ಲ’ ಎಂಬ ಅಡಿಬರಹ ನೀಡಿದ್ದಾರೆ. </p>.<p>ಸಿಂಧು ಅವರು ಆಗಾಗ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಕ್ಷಣಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿಕೊಳ್ಳುತ್ತಿರುತ್ತಾರೆ.</p><p>'ಡ್ರಾಮಾ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ ಸಿಂಧು ಅವರು, ಬಳಿಕ ಸಾಲು ಸಿನಿಮಾಗಳಲ್ಲಿ ನಟಿಸಿ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ‘ಯಾರೇ ಕೂಗಾಡಲಿ’, ‘ಕೇಸ್ ನಂಬರ್.18/9’, ‘ಕಾಫಿ ವಿಥ್ ಮೈ ವೈಫ್’, ‘ಎಂದೆಂದಿಗೂ ನಿನಗಾಗಿ’, ‘ಲವ್ ಇನ್ ಮಂಡ್ಯ’, ‘ಕಾಣದಂತೆ ಮಾಯವಾದನು’ ಸೇರಿ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. </p><p>ಸದ್ಯ, ಸಿಂಧು ಅವರು ಇತ್ತೀಚೆಗೆ ‘ಅಂಡರ್ಕವರ್ ಬಾಸ್’ ವೆಬ್ ಸೀರಿಸ್ನಲ್ಲಿ ಕಾಣಿಸಿಕೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಡ್ರಾಮಾ’ ಚಿತ್ರದಲ್ಲಿ ‘ಚಂದ್ರಿಕಾ’ ಪಾತ್ರದ ಮೂಲಕ ಗಮನ ಸೆಳೆದ ನಟಿ ಸಿಂಧು ಲೋಕನಾಥ್ ಅವರು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. </p><p>ಈ ಕುರಿತು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. </p><p>ದೇವಾಲಯದ ಕಲಾಕೃತಿಯನ್ನು ವೀಕ್ಷಿಸಿದ ಸಿಂಧು, ‘ಚಿತ್ರಗಳು ನ್ಯಾಯ ಹೊಂದಿಸುವುದಿಲ್ಲ’ ಎಂಬ ಅಡಿಬರಹ ನೀಡಿದ್ದಾರೆ. </p>.<p>ಸಿಂಧು ಅವರು ಆಗಾಗ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಕ್ಷಣಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿಕೊಳ್ಳುತ್ತಿರುತ್ತಾರೆ.</p><p>'ಡ್ರಾಮಾ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ ಸಿಂಧು ಅವರು, ಬಳಿಕ ಸಾಲು ಸಿನಿಮಾಗಳಲ್ಲಿ ನಟಿಸಿ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ‘ಯಾರೇ ಕೂಗಾಡಲಿ’, ‘ಕೇಸ್ ನಂಬರ್.18/9’, ‘ಕಾಫಿ ವಿಥ್ ಮೈ ವೈಫ್’, ‘ಎಂದೆಂದಿಗೂ ನಿನಗಾಗಿ’, ‘ಲವ್ ಇನ್ ಮಂಡ್ಯ’, ‘ಕಾಣದಂತೆ ಮಾಯವಾದನು’ ಸೇರಿ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. </p><p>ಸದ್ಯ, ಸಿಂಧು ಅವರು ಇತ್ತೀಚೆಗೆ ‘ಅಂಡರ್ಕವರ್ ಬಾಸ್’ ವೆಬ್ ಸೀರಿಸ್ನಲ್ಲಿ ಕಾಣಿಸಿಕೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>