<p>‘ತೀರ್ಥರೂಪ ತಂದೆಯವರಿಗೆ’ ಸಿನಿಮಾವು ನಿನ್ನೆ(ಗುರುವಾರ) ತೆರೆಕಂಡಿದೆ. ಇದೀಗ ಚಿತ್ರತಂಡ ಪ್ರೇಕ್ಷಕರ ಅಭಿಪ್ರಾಯ ತಿಳಿಯಲು ಸಜ್ಜಾಗಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟರ್ ಹಂಚಿಕೊಂಡಿದೆ.</p><p>ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ‘ತೀರ್ಥರೂಪ ತಂದೆಯವರಿಗೆ’ ಚಿತ್ರವನ್ನು ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನ ಮಾಡಿದ್ದಾರೆ.</p>.ಧರ್ಮೆಂದ್ರ ಕೇವಲ ವ್ಯಕ್ತಿಯಲ್ಲ, ಭಾವನೆ: ಗೆಳೆಯನನ್ನು ನೆನೆದ ಅಮಿತಾಭ್.<p>ಯಾವುದೋ ಕಾರಣದಿಂದ ತಂದೆಯಿಂದ ದೂರವಾದ ಮಗನೊಬ್ಬ ಮತ್ತೆ ತಂದೆಯನ್ನು ಹುಡುಕಿಕೊಂಡು ಹೋಗುವುದೇ ಚಿತ್ರದ ಕಥೆ. ಈ ಚಿತ್ರದಲ್ಲಿ ತಾಯಿಯ ಪಾತ್ರದಲ್ಲಿ ಸಿತಾರ, ವಿಶ್ವನಾಥನಾಗಿ ರಾಜೇಶ್ ನಟರಂಗ, ಪೃಥ್ವಿಯಾಗಿ ನಿಹಾರ್ ಮುಖೇಶ್, ಅಕ್ಷರಳಾಗಿ ರಚನಾ ಇಂದರ್ ನಟಿಸಿದ್ದಾರೆ.<br><br>ದಶಕಗಳ ಕಾಲ ಹೀರೊಯಿನ್ ಆಗಿ ಮಿಂಚಿದ್ದ ಸಿತಾರ ಅವರು ಇತ್ತಿಚೀನ ದಿನಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸಿ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದಾರೆ. </p>.ನನ್ನ ನಟನೆ ನೋಡಿ ಬೆನ್ನುತಟ್ಟಿದ್ದರು: ಚಿಕ್ಕಣ್ಣ ನೆನಪಿನ ಬುತ್ತಿಯಲ್ಲಿ ಪುನೀತ್.<p> 'ಹಾಲುಂಡ ತವರು' ಚಿತ್ರದ ಮೂಲಕ ಕನ್ನಡದ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ಇವರು, ಬಳಿಕ ಚಿರಂಜೀವಿ ಸರ್ಜಾ ಅವರ 'ಅಮ್ಮ ಐ ಲವ್ ಯು' ಹಾಗೂ ಪುನೀತ್ ರಾಜಕುಮಾರ್ ನಟನೆ ‘ಚಕ್ರವ್ಯೂಹ’ ಚಿತ್ರದಲ್ಲಿ ನಟಿಸಿದ್ದರು.<br><br>ದಕ್ಷಿಣ ಭಾರತದ ಎಲ್ಲಾ ಭಾಷೆಯ ಸಿನಿಮಾಗಳಲ್ಲೂ ನಟಿಸಿರುವ ನಟಿ ಸಿತಾರಾ ಅವರು ಈ ಚಿತ್ರದಲ್ಲಿ ನಟಿಸಿರುವುದು ಪ್ರೇಕ್ಷಕರ ಮೆಚ್ಚುಗೆಗೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ತೀರ್ಥರೂಪ ತಂದೆಯವರಿಗೆ’ ಸಿನಿಮಾವು ನಿನ್ನೆ(ಗುರುವಾರ) ತೆರೆಕಂಡಿದೆ. ಇದೀಗ ಚಿತ್ರತಂಡ ಪ್ರೇಕ್ಷಕರ ಅಭಿಪ್ರಾಯ ತಿಳಿಯಲು ಸಜ್ಜಾಗಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟರ್ ಹಂಚಿಕೊಂಡಿದೆ.</p><p>ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ‘ತೀರ್ಥರೂಪ ತಂದೆಯವರಿಗೆ’ ಚಿತ್ರವನ್ನು ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನ ಮಾಡಿದ್ದಾರೆ.</p>.ಧರ್ಮೆಂದ್ರ ಕೇವಲ ವ್ಯಕ್ತಿಯಲ್ಲ, ಭಾವನೆ: ಗೆಳೆಯನನ್ನು ನೆನೆದ ಅಮಿತಾಭ್.<p>ಯಾವುದೋ ಕಾರಣದಿಂದ ತಂದೆಯಿಂದ ದೂರವಾದ ಮಗನೊಬ್ಬ ಮತ್ತೆ ತಂದೆಯನ್ನು ಹುಡುಕಿಕೊಂಡು ಹೋಗುವುದೇ ಚಿತ್ರದ ಕಥೆ. ಈ ಚಿತ್ರದಲ್ಲಿ ತಾಯಿಯ ಪಾತ್ರದಲ್ಲಿ ಸಿತಾರ, ವಿಶ್ವನಾಥನಾಗಿ ರಾಜೇಶ್ ನಟರಂಗ, ಪೃಥ್ವಿಯಾಗಿ ನಿಹಾರ್ ಮುಖೇಶ್, ಅಕ್ಷರಳಾಗಿ ರಚನಾ ಇಂದರ್ ನಟಿಸಿದ್ದಾರೆ.<br><br>ದಶಕಗಳ ಕಾಲ ಹೀರೊಯಿನ್ ಆಗಿ ಮಿಂಚಿದ್ದ ಸಿತಾರ ಅವರು ಇತ್ತಿಚೀನ ದಿನಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸಿ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದಾರೆ. </p>.ನನ್ನ ನಟನೆ ನೋಡಿ ಬೆನ್ನುತಟ್ಟಿದ್ದರು: ಚಿಕ್ಕಣ್ಣ ನೆನಪಿನ ಬುತ್ತಿಯಲ್ಲಿ ಪುನೀತ್.<p> 'ಹಾಲುಂಡ ತವರು' ಚಿತ್ರದ ಮೂಲಕ ಕನ್ನಡದ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ಇವರು, ಬಳಿಕ ಚಿರಂಜೀವಿ ಸರ್ಜಾ ಅವರ 'ಅಮ್ಮ ಐ ಲವ್ ಯು' ಹಾಗೂ ಪುನೀತ್ ರಾಜಕುಮಾರ್ ನಟನೆ ‘ಚಕ್ರವ್ಯೂಹ’ ಚಿತ್ರದಲ್ಲಿ ನಟಿಸಿದ್ದರು.<br><br>ದಕ್ಷಿಣ ಭಾರತದ ಎಲ್ಲಾ ಭಾಷೆಯ ಸಿನಿಮಾಗಳಲ್ಲೂ ನಟಿಸಿರುವ ನಟಿ ಸಿತಾರಾ ಅವರು ಈ ಚಿತ್ರದಲ್ಲಿ ನಟಿಸಿರುವುದು ಪ್ರೇಕ್ಷಕರ ಮೆಚ್ಚುಗೆಗೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>