<p><strong>ಚೆನ್ನೈ</strong>: ತಮಿಳುನಾಡಿನ ಮುಖ್ಯಮಂತ್ರಿಯಾಗಿ ನಟ ವಿಜಯ್ ಅವರು ಅಧಿಕಾರ ಸ್ವೀಕರಿಸಿದ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ನಟಿ ತ್ರಿಶಾ ಕೃಷ್ಣನ್, ಸಮಾರಂಭದ ಬಳಿಕ ಭಾರಿ ಜನಸಂದಣಿಯ ನಡುವೆ ಸಿಲುಕಿ ಪರದಾಡಿದ್ದಾರೆ.</p><p>ಭಾನುವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ತ್ರಿಶಾ ಅವರು ತಮ್ಮ ತಾಯಿ ಉಮಾ ಕೃಷ್ಣನ್ ಅವರೊಂದಿಗೆ ಭಾಗವಹಿಸಿದ್ದರು. ವಿಜಯ್ ಅವರ ಕುಟುಂಬದ ಸದಸ್ಯರಿಗಾಗಿ ಮೀಸಲಾಗಿದ್ದ ವಿಐಪಿ ಸಾಲಿನಲ್ಲಿ ತ್ರಿಶಾ ಕುಳಿತಿದ್ದು ಎಲ್ಲರ ಗಮನ ಸೆಳೆಯಿತು.</p><p>ಇದೇ ವೇಳೆ ಅವರು ವಿಜಯ್ ಅವರ ತಾಯಿ ಶೋಭಾ ಚಂದ್ರಶೇಖರ್ ತ್ರಿಶಾ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ದೃಶ್ಯಗಳು ಕಂಡುಬಂದವು.</p><p><strong>ಅಭಿಮಾನಿಗಳ ಮಧ್ಯೆ ಸಿಲುಕಿದ ನಟಿ</strong></p><p>ಸಮಾರಂಭ ಮುಗಿದ ಬಳಿಕ ಹೊರಬರುವಾಗ ತ್ರಿಶಾ ಅವರು ಅಭಿಮಾನಿಗಳ ನಡುವೆ ಸಿಲುಕಿಕೊಂಡರು. ಭಾರಿ ಭದ್ರತೆಯ ನಡುವೆಯೂ ನಟಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಪೊಲೀಸರು ಎಷ್ಟೇ ಪ್ರಯತ್ನಿಸಿದರೂ ಜನರನ್ನೂ ನಿಯಂತ್ರಿಸುವುದು ಕಷ್ಟವಾಯಿತು.</p><p>ಜನಜಂಗುಳಿಯ ನಡುವೆ ಒಂದಿಂಚೂ ಚಲಿಸಲು ಸಾಧ್ಯವಾಗದಿದ್ದಾಗ, ಪೊಲೀಸರು ತ್ರಿಶಾ ಅವರನ್ನು ಬೇರೊಂದು ದಾರಿಯ ಮೂಲಕ ಸುರಕ್ಷಿತವಾಗಿ ಹೊರಗೆ ಕರೆತಂದರು. ಆ ವೇಳೆ ತ್ರಿಶಾ ತಾಳ್ಮೆಯಿಂದ ವರ್ತಿಸಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.</p><p>ತ್ರಿಶಾ ಅವರು ಸೂರ್ಯ ನಟನೆಯ 'ಕರುಪ್ಪು' ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಆರ್.ಜೆ.ಬಾಲಾಜಿ ನಿರ್ದೇಶನದ ಈ ಬಹುನಿರೀಕ್ಷಿತ ಸಿನಿಮಾ ಮೇ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ತಮಿಳುನಾಡಿನ ಮುಖ್ಯಮಂತ್ರಿಯಾಗಿ ನಟ ವಿಜಯ್ ಅವರು ಅಧಿಕಾರ ಸ್ವೀಕರಿಸಿದ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ನಟಿ ತ್ರಿಶಾ ಕೃಷ್ಣನ್, ಸಮಾರಂಭದ ಬಳಿಕ ಭಾರಿ ಜನಸಂದಣಿಯ ನಡುವೆ ಸಿಲುಕಿ ಪರದಾಡಿದ್ದಾರೆ.</p><p>ಭಾನುವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ತ್ರಿಶಾ ಅವರು ತಮ್ಮ ತಾಯಿ ಉಮಾ ಕೃಷ್ಣನ್ ಅವರೊಂದಿಗೆ ಭಾಗವಹಿಸಿದ್ದರು. ವಿಜಯ್ ಅವರ ಕುಟುಂಬದ ಸದಸ್ಯರಿಗಾಗಿ ಮೀಸಲಾಗಿದ್ದ ವಿಐಪಿ ಸಾಲಿನಲ್ಲಿ ತ್ರಿಶಾ ಕುಳಿತಿದ್ದು ಎಲ್ಲರ ಗಮನ ಸೆಳೆಯಿತು.</p><p>ಇದೇ ವೇಳೆ ಅವರು ವಿಜಯ್ ಅವರ ತಾಯಿ ಶೋಭಾ ಚಂದ್ರಶೇಖರ್ ತ್ರಿಶಾ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ದೃಶ್ಯಗಳು ಕಂಡುಬಂದವು.</p><p><strong>ಅಭಿಮಾನಿಗಳ ಮಧ್ಯೆ ಸಿಲುಕಿದ ನಟಿ</strong></p><p>ಸಮಾರಂಭ ಮುಗಿದ ಬಳಿಕ ಹೊರಬರುವಾಗ ತ್ರಿಶಾ ಅವರು ಅಭಿಮಾನಿಗಳ ನಡುವೆ ಸಿಲುಕಿಕೊಂಡರು. ಭಾರಿ ಭದ್ರತೆಯ ನಡುವೆಯೂ ನಟಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಪೊಲೀಸರು ಎಷ್ಟೇ ಪ್ರಯತ್ನಿಸಿದರೂ ಜನರನ್ನೂ ನಿಯಂತ್ರಿಸುವುದು ಕಷ್ಟವಾಯಿತು.</p><p>ಜನಜಂಗುಳಿಯ ನಡುವೆ ಒಂದಿಂಚೂ ಚಲಿಸಲು ಸಾಧ್ಯವಾಗದಿದ್ದಾಗ, ಪೊಲೀಸರು ತ್ರಿಶಾ ಅವರನ್ನು ಬೇರೊಂದು ದಾರಿಯ ಮೂಲಕ ಸುರಕ್ಷಿತವಾಗಿ ಹೊರಗೆ ಕರೆತಂದರು. ಆ ವೇಳೆ ತ್ರಿಶಾ ತಾಳ್ಮೆಯಿಂದ ವರ್ತಿಸಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.</p><p>ತ್ರಿಶಾ ಅವರು ಸೂರ್ಯ ನಟನೆಯ 'ಕರುಪ್ಪು' ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಆರ್.ಜೆ.ಬಾಲಾಜಿ ನಿರ್ದೇಶನದ ಈ ಬಹುನಿರೀಕ್ಷಿತ ಸಿನಿಮಾ ಮೇ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>