ವಿಡಿಯೋವೊಂದರಲ್ಲಿ ಮಾತನಾಡಿರುವ ಅವರು, ‘ನನಗೆ ನೆರವಾಗಲು ಯೋಗೇಶ್ ಎಂಬುವವರ ಖಾತೆಗೆ ಹಾಕಿರುವ ₹ 3 ಲಕ್ಷ ನನಗೆ ಬೇಡ. ಇದುವರೆಗೂ ಆ ಹಣ ಸಿಕ್ಕಿಲ್ಲ. ಇತ್ತೀಚೆಗೆ ಯಾರ್ಯಾರೋ ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಕೃತಜ್ಞತೆ ಇಲ್ಲದವಳ ರೀತಿ ಬಿಂಬಿಸುತ್ತಿದ್ದಾರೆ. ಹೀಗಾಗಿ ನಾನು ಕರ್ನಾಟಕ ಬಿಟ್ಟು ಹೋಗುತ್ತೇನೆ’ ಎಂದಿದ್ದಾರೆ.