ಉಳಿದಂತೆ ರಂಗಾಯಣ ರಘು, ವಿಜಯ್ ಚೆಂಡೂರು ಸಾಥ್ ನೀಡಲಿದ್ದಾರೆ. ನಿರೂಪಕ ಮಂಜುನಾಥ್ ದಾವಣಗೆರೆ ಈ ಸಿನಿಮಾದ ಪ್ರಮುಖ ಪಾತ್ರವೊಂದಕ್ಕೆ ಬಣ್ಣಹಚ್ಚಿದ್ದಾರೆ. ಆರ್. ಸಿದ್ದರಾಜು ಬಂಡವಾಳ ಹೂಡಿದ್ದಾರೆ. ಶಿವುಪುತ್ರ ಅವರ ಛಾಯಾಗ್ರಹಣವಿದೆ. ರಾಬರ್ಟ್ ಸಂಗೀತ ಸಂಯೋಜಿಸಿದ್ದಾರೆ. ಬೆಂಗಳೂರು, ಸಕಲೇಶಪುರ ಹಾಗೂ ವಿದೇಶದಲ್ಲಿ ಶೂಟಿಂಗ್ ನಡೆಸಲು ಚಿತ್ರತಂಡ ಸಿದ್ಧತೆ ನಡೆಸಿದೆ.