ಥ್ರಿಲ್ಲರ್ ಕಥೆ ಆಧರಿಸಿರುವ ಇದನ್ನು ಹರೀಶ್ ಭಾರದ್ವಾಜ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯ ಜವಾಬ್ದಾರಿಯನ್ನು ಅವರೇ ಹೊತ್ತಿದ್ದಾರೆ. ಮೂವತ್ತು ದಿನಗಳ ಕಾಲ ಬೆಂಗಳೂರು, ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಉದಯ್ ಬಲ್ಲಾಳ್ ಅವರ ಛಾಯಾಗ್ರಹಣವಿದೆ. ಹರೀಶ್ ಸಂಕಲನ, ಸುನೀಲ್ ರಾಡಿಗರ್(ಬಾಲಿವುಡ್) ಅವರ ಸಾಹಸ ನಿರ್ದೇಶನವಿದೆ. ಹರಿಕೃಷ್ಣ ನೃತ್ಯ ನಿರ್ದೇಶಿಸಿದ್ದಾರೆ.
ವಿ. ನಾಗೇಂದ್ರಪ್ರಸಾದ್, ಫಣೀಶ್ ಭಾರದ್ವಾಜ್ ಸಾಹಿತ್ಯ ರಚಿಸಿದ್ದು, ಶ್ರೀಹರ್ಷ ಸಂಭಾಷಣೆ ಬರೆದಿದ್ದಾರೆ.