<p>‘ಚಿತ್ರರಂಗದಲ್ಲಿ ನನ್ನ ಆರಂಭದ ದಿನಗಳು ಸುಲಭವಾಗಿರಲಿಲ್ಲ. ನಾನು ಬರೆದ ಸ್ಕ್ರಿಪ್ಟ್ಗಳನ್ನು ಬೇರೆಯವರು ಕದ್ದು ಸಿನಿಮಾ ಮಾಡಿ ₹100 ಕೋಟಿಗೂ ಅಧಿಕ ಗಳಿಕೆ ಮಾಡಿಕೊಂಡಿದ್ದಾರೆ‘ ಎಂದು ‘ಧುರಂಧರ್’ ನಿರ್ದೇಶಕ ಆದಿತ್ಯಧರ್ ಹೇಳಿಕೊಂಡಿದ್ದಾರೆ.</p>.ಲವ್ ಮಾಕ್ಟೇಲ್ –3 ವಿವಾದ ಬಗೆಹರಿಸಿದ ಕೆಎಫ್ಸಿಸಿ ಅಧ್ಯಕ್ಷೆ ಜಯಮಾಲಾ.ಹೊಸ ಸಿನಿಮಾ ಘೋಷಿಸಿದ ಮಾಜಿ ಬಿಗ್ಬಾಸ್ ಸ್ಪರ್ಧಿ, ನಟಿ ಸಂಗೀತಾ ಶೃಂಗೇರಿ.<p>ಧುರಂಧರ್ ಹಾಗೂ ಧುರಂಧರ್–2 ಸಿನಿಮಾಗಳು ಯಶಸ್ಸು ಗಳಿಸುತ್ತಿದ್ದಂತೆ, ಅವರ ಈ ಹಿಂದಿನ ಸಂದರ್ಶನವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ‘ನನ್ನ ಆರಂಭದ ಸಿನಿಮಾ ಜರ್ನಿಯಲ್ಲಿ ಸಾಲು ಸಾಲು ಮೋಸ ಅನುಭವಿಸಿದ್ದೇನೆ. ಚಿತ್ರರಂಗದಲ್ಲಿ ಯಾರನ್ನು ನಂಬಬೇಕು ಎಂಬುವುದೇ ದೊಡ್ಡ ಸವಾಲಾಗಿತ್ತು’ ಎಂದಿದ್ದಾರೆ.</p><p>‘ನಾನು ಬರೆದ ಸ್ಕ್ರಿಪ್ಟ್ಗಳನ್ನು ಕದ್ದು, ಬೇರೆಯವರು ಅದರಿಂದಲೇ ನೂರಾರು ಕೋಟಿ ಗಳಿಸಿದ್ದಾರೆ. ಆದರೆ, ಆ ಯಶಸ್ಸಿನ ಹಿಂದೆ ಇದ್ದ ನನ್ನ ಶ್ರಮಕ್ಕೆ ಕಿಂಚಿತ್ತೂ ಮನ್ನಣೆ ಸಿಗಲಿಲ್ಲ. ಚಿತ್ರರಂಗದಲ್ಲಿ ಒಬ್ಬ ನಿರ್ದೇಶಕನಾಗಿ ಗುರುತಿಸಿಕೊಳ್ಳಲು 10 ರಿಂದ 12 ವರ್ಷಗಳ ಕಾಲ ನಿರಂತರ ಶ್ರಮವಹಿಸಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ.</p><p>‘ಉರಿ ದಿ ಸರ್ಜಿಕಲ್ ಸ್ಟ್ರೈಕ್’, ‘ಧುರಂಧರ್’ ಹಾಗೂ ‘ಧುರಂಧರ್: ದಿ ರಿವೆಂಜ್’ ಚಿತ್ರವನ್ನು ನಿರ್ದೇಶಿಸಿ ಖ್ಯಾತಿ ಗಳಿಸಿದ್ದಾರೆ.</p><p>‘ಧುರಂಧರ್2’ ಚಿತ್ರವು ₹1000ಕೋಟಿಗೂ ಅಧಿಕ ಗಳಿಕೆ ಕಂಡು, ಗಲ್ಲಾ ಪೆಟ್ಟಿಗೆಯಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಚಿತ್ರರಂಗದಲ್ಲಿ ನನ್ನ ಆರಂಭದ ದಿನಗಳು ಸುಲಭವಾಗಿರಲಿಲ್ಲ. ನಾನು ಬರೆದ ಸ್ಕ್ರಿಪ್ಟ್ಗಳನ್ನು ಬೇರೆಯವರು ಕದ್ದು ಸಿನಿಮಾ ಮಾಡಿ ₹100 ಕೋಟಿಗೂ ಅಧಿಕ ಗಳಿಕೆ ಮಾಡಿಕೊಂಡಿದ್ದಾರೆ‘ ಎಂದು ‘ಧುರಂಧರ್’ ನಿರ್ದೇಶಕ ಆದಿತ್ಯಧರ್ ಹೇಳಿಕೊಂಡಿದ್ದಾರೆ.</p>.ಲವ್ ಮಾಕ್ಟೇಲ್ –3 ವಿವಾದ ಬಗೆಹರಿಸಿದ ಕೆಎಫ್ಸಿಸಿ ಅಧ್ಯಕ್ಷೆ ಜಯಮಾಲಾ.ಹೊಸ ಸಿನಿಮಾ ಘೋಷಿಸಿದ ಮಾಜಿ ಬಿಗ್ಬಾಸ್ ಸ್ಪರ್ಧಿ, ನಟಿ ಸಂಗೀತಾ ಶೃಂಗೇರಿ.<p>ಧುರಂಧರ್ ಹಾಗೂ ಧುರಂಧರ್–2 ಸಿನಿಮಾಗಳು ಯಶಸ್ಸು ಗಳಿಸುತ್ತಿದ್ದಂತೆ, ಅವರ ಈ ಹಿಂದಿನ ಸಂದರ್ಶನವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ‘ನನ್ನ ಆರಂಭದ ಸಿನಿಮಾ ಜರ್ನಿಯಲ್ಲಿ ಸಾಲು ಸಾಲು ಮೋಸ ಅನುಭವಿಸಿದ್ದೇನೆ. ಚಿತ್ರರಂಗದಲ್ಲಿ ಯಾರನ್ನು ನಂಬಬೇಕು ಎಂಬುವುದೇ ದೊಡ್ಡ ಸವಾಲಾಗಿತ್ತು’ ಎಂದಿದ್ದಾರೆ.</p><p>‘ನಾನು ಬರೆದ ಸ್ಕ್ರಿಪ್ಟ್ಗಳನ್ನು ಕದ್ದು, ಬೇರೆಯವರು ಅದರಿಂದಲೇ ನೂರಾರು ಕೋಟಿ ಗಳಿಸಿದ್ದಾರೆ. ಆದರೆ, ಆ ಯಶಸ್ಸಿನ ಹಿಂದೆ ಇದ್ದ ನನ್ನ ಶ್ರಮಕ್ಕೆ ಕಿಂಚಿತ್ತೂ ಮನ್ನಣೆ ಸಿಗಲಿಲ್ಲ. ಚಿತ್ರರಂಗದಲ್ಲಿ ಒಬ್ಬ ನಿರ್ದೇಶಕನಾಗಿ ಗುರುತಿಸಿಕೊಳ್ಳಲು 10 ರಿಂದ 12 ವರ್ಷಗಳ ಕಾಲ ನಿರಂತರ ಶ್ರಮವಹಿಸಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ.</p><p>‘ಉರಿ ದಿ ಸರ್ಜಿಕಲ್ ಸ್ಟ್ರೈಕ್’, ‘ಧುರಂಧರ್’ ಹಾಗೂ ‘ಧುರಂಧರ್: ದಿ ರಿವೆಂಜ್’ ಚಿತ್ರವನ್ನು ನಿರ್ದೇಶಿಸಿ ಖ್ಯಾತಿ ಗಳಿಸಿದ್ದಾರೆ.</p><p>‘ಧುರಂಧರ್2’ ಚಿತ್ರವು ₹1000ಕೋಟಿಗೂ ಅಧಿಕ ಗಳಿಕೆ ಕಂಡು, ಗಲ್ಲಾ ಪೆಟ್ಟಿಗೆಯಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>