ನಿರ್ದೇಶಕ, ನಟ ಓಂಪ್ರಕಾಶ್ ರಾವ್ ನಿರ್ದೇಶನದಲ್ಲಿ ನಟ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರಕ್ಕೆ ‘ಇಲಾಖೆ’ ಎಂದು ಶೀರ್ಷಿಕೆ ಇಡಲಾಗಿದೆ.
ಈಗಾಗಲೇ ಚಿತ್ರ ಕೊನೆಯ ಹಂತದ ಚಿತ್ರೀಕರಣದಲ್ಲಿದ್ದು, ಜೂನ್ನಲ್ಲಿ ಕೊನೆಯ ಶೆಡ್ಯೂಲ್ ನಿಗದಿಯಾಗಿದೆ. ‘ಲಾಕಪ್ ಡೆತ್’, ‘ಎ.ಕೆ.47’ ಚಿತ್ರಗಳ ರೀತಿಯ ಕಥೆಯನ್ನು ‘ಇಲಾಖೆ’ ಹೊಂದಿದೆ. ಬಹಳ ವರ್ಷಗಳ ನಂತರ ನಾನೇ ಕಥೆ ಬರೆದು ನಿರ್ದೇಶಿಸುತ್ತಿರುವ ಚಿತ್ರವಿದು ಎನ್ನುತ್ತಾರೆ ಓಂಪ್ರಕಾಶ್ ರಾವ್.
ಶ್ರೀರೇಣುಕಾ ಮೂವೀ ಮೇಕರ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುರುವ ಈ ಚಿತ್ರಕ್ಕೆ ಎಂ.ಎಸ್. ರಮೇಶ್ ಸಂಭಾಷಣೆ ಬರೆದಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ರವಿಕುಮಾರ್ ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಲಕ್ಷ್ಮಣ್ ರೆಡ್ಡಿ ಸಂಕಲನ ಈ ಚಿತ್ರಕ್ಕಿದೆ.