<p><strong>ಮುಂಬೈ</strong>: ಕೇರಳ ಮೂಲದ ಕಿರಿಯ ಕಲಾವಿದ ಎಂ.ಎಫ್. ಕಪಿಲ್ ಅವರ ಸಾವಿನ ಪ್ರಕರಣದ ಕುರಿತು ಕೂಲಂಕಷವಾಗಿ ತನಿಖೆ ನಡೆಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಅಖಿಲ ಭಾರತ ಸಿನಿಮಾ ಕಾರ್ಮಿಕರ ಸಂಘಟನೆ (ಎಐಸಿಡಬ್ಲ್ಯುಎ)ಯು ಒತ್ತಾಯಿಸಿದೆ. </p><p>ಕೊಲ್ಲೂರು ಬಳಿಯ ನಡೆಯುತ್ತಿದ್ದ ಸಿನಿಮಾ ಚಿತ್ರೀಕರಣದ ಬಿಡುವಿನ ವೇಳೆ ಕಪಿಲ್ ಅವರು ಸೌಪರ್ಣಿಕ ನದಿಯಲ್ಲಿ ಈಜಲು ಹೋಗಿ ಮುಳುಗಿ, ಮೃತಪಟ್ಟಿದ್ದರು. ಮೃತ ಕಪಿಲ್ ಅವರು, ರಿಷಬ್ ಶೆಟ್ಟಿ ನಿರ್ಮಾಪರಾಗಿರುವ ‘ಕಾಂತಾರ: ಚಾಪ್ಟರ್ 1’(ಕಾಂತಾರ ಪ್ರೀಕ್ವೆಲ್) ಚಿತ್ರದ ಭಾಗವಾಗಿದ್ದರು. </p><p>ಈ ಕುರಿತು ನಿಷ್ಪಕ್ಷಪಾತ ತನಿಖೆಗಾಗಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ಈ ಸಂಬಂಧ ರಿಷಬ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಬೇಕು. ಕಪಿಲ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಐಸಿಡಬ್ಲ್ಯುಎ ಮನವಿ ಮಾಡಿದೆ. </p>.<p>‘ಕೇರಳದ ವೈಕಮ್ನ ಮೂಸರಿಥಾರ ಗ್ರಾಮದವರಾದ ಕಿರಿಯ ಕಲಾವಿದ ಕಪಿಲ್, ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಮೇ 6ರಂದು 3.45ರ ಸುಮಾರಿಗೆ ಕರ್ನಾಟಕದ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ’ ಎಂದು ಎಐಸಿಡಬ್ಲ್ಯುಎ ‘ಎಕ್ಸ್’ನಲ್ಲಿ ತಿಳಿಸಿದೆ. </p><p>ಅಲ್ಲದೇ ಮೃತನ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡುವಂತೆಯೂ ಒತ್ತಾಯಿಸಿದೆ.</p><p>‘ನದಿಯಲ್ಲಿ ಈಜಲು ಹೋಗಿ ಮುಳುಗಿ ಕಲಾವಿದ ಮೃತಪಟ್ಟಿದ್ದಾನೆ. ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿನಿಮಾ ನಿರ್ಮಾಪಕ ಮತ್ತು ಪ್ರೊಡಕ್ಷನ್ ಹೌಸ್ ಮಾಲೀಕ ರಿಷಬ್ ಶೆಟ್ಟಿ ಹೇಳಿದ್ದಾರೆ’ ಎಂಬುದಾಗಿ ಎಐಸಿಡಬ್ಲ್ಯುಎ ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಕೇರಳ ಮೂಲದ ಕಿರಿಯ ಕಲಾವಿದ ಎಂ.ಎಫ್. ಕಪಿಲ್ ಅವರ ಸಾವಿನ ಪ್ರಕರಣದ ಕುರಿತು ಕೂಲಂಕಷವಾಗಿ ತನಿಖೆ ನಡೆಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಅಖಿಲ ಭಾರತ ಸಿನಿಮಾ ಕಾರ್ಮಿಕರ ಸಂಘಟನೆ (ಎಐಸಿಡಬ್ಲ್ಯುಎ)ಯು ಒತ್ತಾಯಿಸಿದೆ. </p><p>ಕೊಲ್ಲೂರು ಬಳಿಯ ನಡೆಯುತ್ತಿದ್ದ ಸಿನಿಮಾ ಚಿತ್ರೀಕರಣದ ಬಿಡುವಿನ ವೇಳೆ ಕಪಿಲ್ ಅವರು ಸೌಪರ್ಣಿಕ ನದಿಯಲ್ಲಿ ಈಜಲು ಹೋಗಿ ಮುಳುಗಿ, ಮೃತಪಟ್ಟಿದ್ದರು. ಮೃತ ಕಪಿಲ್ ಅವರು, ರಿಷಬ್ ಶೆಟ್ಟಿ ನಿರ್ಮಾಪರಾಗಿರುವ ‘ಕಾಂತಾರ: ಚಾಪ್ಟರ್ 1’(ಕಾಂತಾರ ಪ್ರೀಕ್ವೆಲ್) ಚಿತ್ರದ ಭಾಗವಾಗಿದ್ದರು. </p><p>ಈ ಕುರಿತು ನಿಷ್ಪಕ್ಷಪಾತ ತನಿಖೆಗಾಗಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ಈ ಸಂಬಂಧ ರಿಷಬ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಬೇಕು. ಕಪಿಲ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಐಸಿಡಬ್ಲ್ಯುಎ ಮನವಿ ಮಾಡಿದೆ. </p>.<p>‘ಕೇರಳದ ವೈಕಮ್ನ ಮೂಸರಿಥಾರ ಗ್ರಾಮದವರಾದ ಕಿರಿಯ ಕಲಾವಿದ ಕಪಿಲ್, ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಮೇ 6ರಂದು 3.45ರ ಸುಮಾರಿಗೆ ಕರ್ನಾಟಕದ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ’ ಎಂದು ಎಐಸಿಡಬ್ಲ್ಯುಎ ‘ಎಕ್ಸ್’ನಲ್ಲಿ ತಿಳಿಸಿದೆ. </p><p>ಅಲ್ಲದೇ ಮೃತನ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡುವಂತೆಯೂ ಒತ್ತಾಯಿಸಿದೆ.</p><p>‘ನದಿಯಲ್ಲಿ ಈಜಲು ಹೋಗಿ ಮುಳುಗಿ ಕಲಾವಿದ ಮೃತಪಟ್ಟಿದ್ದಾನೆ. ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿನಿಮಾ ನಿರ್ಮಾಪಕ ಮತ್ತು ಪ್ರೊಡಕ್ಷನ್ ಹೌಸ್ ಮಾಲೀಕ ರಿಷಬ್ ಶೆಟ್ಟಿ ಹೇಳಿದ್ದಾರೆ’ ಎಂಬುದಾಗಿ ಎಐಸಿಡಬ್ಲ್ಯುಎ ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>