ಉತ್ತರ ಕನ್ನಡ ಜಿಲ್ಲೆ ಯ ಶಿರಸಿ ಟಿ.ಎಸ್.ಎಸ್ ಅಡಿಕೆ ವ್ಯಾಪಾರ ಅಂಗಳದಲ್ಲಿ ಅಡಿಕೆ ವ್ಯಾಪಾರ ಸಂಘಟನೆಯ ಸಹಯೋಗದಲ್ಲಿ ಫೆ. 20ರಂದು ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಅಡಿಕೆ ಸುಲಿಯುವ ಸ್ಪರ್ಧೆ ನಡೆಯಲಿದೆ. ಸುಮಾರು 200ಕ್ಕೂ ಹೆಚ್ಚು ಸ್ಪರ್ಧಿಗಳು ಈಗಾಗಲೇ ಹೆಸರು ನೋಂದಾಯಿಸಿದ್ದಾರೆ. ವಿಜೇತರಿಗೆ ಬಹುಮಾನವೂ ಇದೆ. ಚಿತ್ರದ ನಾಯಕ ದಿಗಂತ್, ನಾಯಕಿ ಐಂದ್ರಿತಾ ರೇ, ರಂಜನಿ ರಾಘವನ್ ಹಾಗೂ ಚಿತ್ರತಂಡದ ಬಹುತೇಕ ಸದಸ್ಯರು ಅಂದು ಉಪಸ್ಥಿತರಿರುತ್ತಾರೆ.