ಅಜಿತ್ಕುಮಾರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಮಾಜಿ ಪೋಲೀಸ್ ಆಯುಕ್ತ ಬಿ.ಬಿ. ಅಶೋಕ್ಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ‘ನಾವೇನೇ ಪ್ರಕರಣ ಪತ್ತೆ ಮಾಡಿದರೂ ಅದನ್ನು ಸಿನಿಮಾಗಳಲ್ಲಿ ರೋಚಕವಾಗಿ ತೋರಿಸುತ್ತಾರೆ. ನಾನು ಜಯರಾಜ್ ಜೊತೆ ತುಂಬಾ ಕಾದಾಡಿದವನು. ನಾನು ಪೋಲೀಸ್ ಇಲಾಖೆಗೆ ಬರಲು ಒಂದು ರೀತಿ ಸಿನಮಾನೇ ಕಾರಣ, ಅಮಿತಾಭ್ ಅವರ ಜಂಜೀರ್ ಸಿನಿಮಾ ನೋಡಿ ಪ್ರೇರಿತನಾಗಿದ್ದೆ. 35 ವರ್ಷ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ಯಾರು ಪೋಲೀಸರನ್ನು ದ್ವೇಷಿಸುತ್ತಿದ್ದರೋ ಅವರ ಮಗನೇ ಈಗ ಪೋಲೀಸ್ ಪಾತ್ರ ಮಾಡುತ್ತಿದ್ದಾನೆ’ ಎಂದು ತಮ್ಮ ಅನುಭವಗಳನ್ನು ಅಶೋಕ್ ಕುಮಾರ್ ಬಿಚ್ಚಿಟ್ಟರು.