<p>ನಟಿ ಅಕ್ಷತಾ ಪಾಂಡವಪುರ ಮುಖ್ಯಭೂಮಿಕೆಯಲ್ಲಿರುವ ‘ಕೌಮುದಿ’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ‘ಕಂದೀಲು’ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದ ಯಶೋದ ಪ್ರಕಾಶ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಲಾತ್ಮಕ ಚಿತ್ರ ನಿರ್ಮಾಣದಲ್ಲಿ ಗುರುತಿಸಿಕೊಂಡಿರುವ ಯಶೋದ ಅವರಿಗೆ ಇದು ಮೂರನೇ ಚಿತ್ರವಾಗಿದ್ದು, ತಮ್ಮದೇ ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಅಡಿಯಲ್ಲಿ ಬಂಡವಾಳವನ್ನು ಹೂಡುತ್ತಿದ್ದಾರೆ.</p>.<p>‘ಶಿಕ್ಷಣ ಹಾಗೂ ವೈಜ್ಞಾನಿಕ ಜ್ಞಾನದ ಕೊರತೆಯಿಂದಾಗಿ ಮೂಲನಂಬಿಕೆ, ಮೂಢನಂಬಿಕೆಯ ವ್ಯತ್ಯಾಸ ತಿಳಿಯದೆ ಬದುಕಿಗೆ ಅಪಾಯ ತಂದೊಡ್ಡುವ ಸಂಪ್ರದಾಯ, ಆಚರಣೆಗಳ ಸತ್ಯ-ವಾಸ್ತವಗಳ ಸುತ್ತ ಸಿನಿಮಾವು ಬೆಳಕು ಚೆಲ್ಲಲಿದೆ. ಗತಕಾಲದಿಂದ ಇಂದಿನವರೆಗೂ ಗ್ರಾಮೀಣ ಭಾಗದಲ್ಲಿ ಇಂತಹ ಪದ್ದತಿಗಳನ್ನು ಅನುಸರಿಸುತ್ತಿದ್ದಾರೆ. ಕಥಾನಾಯಕಿ ಇದರ ವಿರುದ್ದ ಧ್ವನಿ ಎತ್ತಿ, ಯಾವ ರೀತಿ ಹೋರಾಟ ಮಾಡುತ್ತಾಳೆ ಎಂಬುದನ್ನು ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದರು ನಿರ್ದೇಶಕಿ ಯಶೋದ.</p>.<p>ಕುಮಾರಿ ದೀಪಿಕಾ, ಪ್ರತೀಕ, ಅಂಕಿತಾಮೂರ್ತಿ, ನೀನಾಸಂ ನಟರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಶ್ರೀಸುರೇಶ್ ಸಂಗೀತ, ಪಿ.ವಿ.ಆರ್.ಸ್ವಾಮಿ ಗೂಗಾರೆದೊಡ್ಡಿ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. ಕನಕಪುರ ಸುತ್ತಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣವನ್ನು ಮುಗಿಸಲು ತಂಡವು ಯೋಜನೆ ರೂಪಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಟಿ ಅಕ್ಷತಾ ಪಾಂಡವಪುರ ಮುಖ್ಯಭೂಮಿಕೆಯಲ್ಲಿರುವ ‘ಕೌಮುದಿ’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ‘ಕಂದೀಲು’ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದ ಯಶೋದ ಪ್ರಕಾಶ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಲಾತ್ಮಕ ಚಿತ್ರ ನಿರ್ಮಾಣದಲ್ಲಿ ಗುರುತಿಸಿಕೊಂಡಿರುವ ಯಶೋದ ಅವರಿಗೆ ಇದು ಮೂರನೇ ಚಿತ್ರವಾಗಿದ್ದು, ತಮ್ಮದೇ ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಅಡಿಯಲ್ಲಿ ಬಂಡವಾಳವನ್ನು ಹೂಡುತ್ತಿದ್ದಾರೆ.</p>.<p>‘ಶಿಕ್ಷಣ ಹಾಗೂ ವೈಜ್ಞಾನಿಕ ಜ್ಞಾನದ ಕೊರತೆಯಿಂದಾಗಿ ಮೂಲನಂಬಿಕೆ, ಮೂಢನಂಬಿಕೆಯ ವ್ಯತ್ಯಾಸ ತಿಳಿಯದೆ ಬದುಕಿಗೆ ಅಪಾಯ ತಂದೊಡ್ಡುವ ಸಂಪ್ರದಾಯ, ಆಚರಣೆಗಳ ಸತ್ಯ-ವಾಸ್ತವಗಳ ಸುತ್ತ ಸಿನಿಮಾವು ಬೆಳಕು ಚೆಲ್ಲಲಿದೆ. ಗತಕಾಲದಿಂದ ಇಂದಿನವರೆಗೂ ಗ್ರಾಮೀಣ ಭಾಗದಲ್ಲಿ ಇಂತಹ ಪದ್ದತಿಗಳನ್ನು ಅನುಸರಿಸುತ್ತಿದ್ದಾರೆ. ಕಥಾನಾಯಕಿ ಇದರ ವಿರುದ್ದ ಧ್ವನಿ ಎತ್ತಿ, ಯಾವ ರೀತಿ ಹೋರಾಟ ಮಾಡುತ್ತಾಳೆ ಎಂಬುದನ್ನು ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದರು ನಿರ್ದೇಶಕಿ ಯಶೋದ.</p>.<p>ಕುಮಾರಿ ದೀಪಿಕಾ, ಪ್ರತೀಕ, ಅಂಕಿತಾಮೂರ್ತಿ, ನೀನಾಸಂ ನಟರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಶ್ರೀಸುರೇಶ್ ಸಂಗೀತ, ಪಿ.ವಿ.ಆರ್.ಸ್ವಾಮಿ ಗೂಗಾರೆದೊಡ್ಡಿ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. ಕನಕಪುರ ಸುತ್ತಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣವನ್ನು ಮುಗಿಸಲು ತಂಡವು ಯೋಜನೆ ರೂಪಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>