ಎಂ.ಭೂಪತಿ ಬಂಡವಾಳ ಹೂಡಿರುವ ಈ ಚಿತ್ರ ಬಿಡುಗಡೆಗೆ ಸಿದ್ಧವಿದೆ. ಬೆಂಗಳೂರು, ಚಿಕ್ಕಮಗಳೂರು, ಮೇಲುಕೋಟೆ ಸುತ್ತಮುತ್ತ ಚಿತ್ರೀಕರಣಗೊಂಡಿದೆ. ಸಾಯಿ ಸೋಮೇಶ್ ಸಂಗೀತ, ಬುಗುಡೆ ವೀರೇಶ್ ಛಾಯಾಚಿತ್ರಗ್ರಹಣ, ಮುತ್ತುರಾಜ್ ಸಂಕಲನ ಈ ಚಿತ್ರಕ್ಕಿದೆ. ದರ್ಶಿನಿ ಆರ್.ಒಡೆಯರ್, ನಿಸರ್ಗ ಮನ್ವೀರ್ ಚವ್ಹಾನ್, ವಿವೇಕ ಚಕ್ರವರ್ತಿ ಮುಂತಾದವರು ನಟಿಸಿದ್ದಾರೆ.