‘ನನಗೆ ನಿಜಜೀವನದಲ್ಲಿ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸಿತ್ತು. ಅದು ಆಗಲಿಲ್ಲ. ನಿರ್ದೇಶಕರು ನೀವು ಈ ಚಿತ್ರದಲ್ಲಿ ತನಿಖಾಧಿಕಾರಿ ಪಾತ್ರ ನೀಡಿದ್ದಾರೆ. ಸಾಹಸ ದೃಶ್ಯಗಳನ್ನೂ ಈ ಸಿನಿಮಾದಲ್ಲಿ ಮಾಡಿದ್ದೇನೆ. ರವಿವರ್ಮ ಹಾಗೂ ಮಾಸ್ ಮಾದ ಅವರು ಸಾಹಸ ಸಂಯೋಜನೆಯಲ್ಲಿ ಸಾಹಸ ಸನ್ನಿವೇಶಗಳು ಚೆನ್ನಾಗಿ ಬಂದಿದೆ’ ಎನ್ನುತ್ತಾರೆ ಅದಿತಿ. ವಿ.ಚಂದ್ರು ಈ ಸಿನಿಮಾ ನಿರ್ಮಾಣ ಮಾಡಿದ್ದು, ನಾಗಾರ್ಜುನ್, ಮೇಘಶ್ರೀ, ಮಿಮಿಕ್ರಿ ಗೋಪಿ, ಚಂದ್ರಕಲಾ ಮೋಹನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.