‘ಮುಂದಿನ ದಿನಗಳಲ್ಲಿ ಸಣ್ಣ ಪುಟ್ಟ ಕಾರ್ಯಕ್ರಮಗಳೇ ಇರಲಿ ಕಾರ್ಯಕ್ರಮಕ್ಕೆ ಬಂದ ಪ್ರತಿಯೊಬ್ಬರೂ ಒಂದೊಂದು ಸಸಿಗಳನ್ನು ಪಡೆದು ಉತ್ತಮ ಸ್ಥಳಗಳಲ್ಲಿ ಬೆಳೆಸಿ ಪೋಷಿಸಬೇಕು. ಹನಿ ಹನಿ ಕೂಡಿದರೆ ಹಳ್ಳ ಎಂಬಂತೆ ಭೂಮಂಡಲದ ಪ್ರತಿಯೊಬ್ಬ ಮಾನವ ಜೀವಿಯೂ ತಮ್ಮ ಕುಟುಂಬ ಸದಸ್ಯರ ಹೆಸರಲ್ಲಿ ಸಸಿ ನೆಟ್ಟು ಬೆಳೆಸಬೇಕು. ಆಗ ಮಾತ್ರ ನಮ್ಮ ಸುತ್ತಲಿನ ಪರಿಸರ ಮಲೆನಾಡು ಆಗಿ ಪರಿವರ್ತನೆ ಹೊಂದಲು ಸಾಧ್ಯ’ ಎಂದು ಅಮರಪ್ಪ ಭಾವಿಕಟ್ಟಿಯ ರಾಜಶೇಖರ ಜಾವೂರ ಹೆಳಿದರು