<p>ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾಗೆ ನಟ ಅಲ್ಲು ಅರ್ಜುನ್ ಅಭಿನಂದಿಸಿದ್ದಾರೆ. ಈ ವೇಳೆ ಕನ್ನಡದ ಸಾಲುಗಳನ್ನು ತಮ್ಮ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಅನಿಲ್ ರವಿಪುಡಿ ನಿರ್ದೇಶನದ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ ಜನವರಿ 12ರಂದು ಬಿಡುಗಡೆಯಾಗಿದೆ ಸಿನಿಮಾಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಚಿತ್ರದಲ್ಲಿ ವೆಂಕಟೇಶ್ ದಗ್ಗುಬಾಟಿ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕನ್ನಡದ ಡೈಲಾಗ್ ಹೇಳಿದ್ದಾರೆ. ಹೀಗಾಗಿ ವೆಂಕಟೇಶ್ ಅವರಿಗೆ ಅಲ್ಲು ಅರ್ಜುನ್ ಕನ್ನಡದ ಸಾಲುಗಳಲ್ಲಿ ‘ತುಂಬಾ ಚೆನ್ನಾಗಿ ಮಾಡಿದಿರಾ’ ಎಂದು ಬರೆದು ಅಭಿನಂದಿಸಿದ್ದಾರೆ. </p><p>‘ಮನ ಶಂಕರ ವರ ಪ್ರಸಾದ್ ಗಾರು ಚಿತ್ರತಂಡಕ್ಕೆ ಅಭಿನಂದನೆಗಳು. ಬಾಸ್ ಮತ್ತೆ ಬಂದಿದ್ದಾರೆ. ನಮ್ಮ ಮೆಗಾಸ್ಟಾರ್ ಅವರನ್ನು ಪರದೆಯ ಮೇಲೆ ನೋಡಿ ಸಂತೋಷವಾಯಿತು. ಇದು ಕೇವಲ ಸಂಕ್ರಾಂತಿಯ ಬ್ಲಾಕ್ಬಸ್ಟರ್ ಅಲ್ಲ, ಸಂಕ್ರಾಂತಿಯ ಬಾಸ್-ಬಸ್ಟರ್’ ಎಂದು ಬರೆದಿದ್ದಾರೆ.</p><p>ಬಹುದಿನಗಳ ನಂತರ ಚಿರಂಜೀವಿ ಅವರು ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ವರದಿಗಳ ಪ್ರಕಾರ ಸಿನಿಮಾವು ಈ ವರೆಗೆ ₹250 ಕೋಟಿಗೂ ಅಧಿಕ ಗಳಿಕೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾಗೆ ನಟ ಅಲ್ಲು ಅರ್ಜುನ್ ಅಭಿನಂದಿಸಿದ್ದಾರೆ. ಈ ವೇಳೆ ಕನ್ನಡದ ಸಾಲುಗಳನ್ನು ತಮ್ಮ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಅನಿಲ್ ರವಿಪುಡಿ ನಿರ್ದೇಶನದ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ ಜನವರಿ 12ರಂದು ಬಿಡುಗಡೆಯಾಗಿದೆ ಸಿನಿಮಾಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಚಿತ್ರದಲ್ಲಿ ವೆಂಕಟೇಶ್ ದಗ್ಗುಬಾಟಿ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕನ್ನಡದ ಡೈಲಾಗ್ ಹೇಳಿದ್ದಾರೆ. ಹೀಗಾಗಿ ವೆಂಕಟೇಶ್ ಅವರಿಗೆ ಅಲ್ಲು ಅರ್ಜುನ್ ಕನ್ನಡದ ಸಾಲುಗಳಲ್ಲಿ ‘ತುಂಬಾ ಚೆನ್ನಾಗಿ ಮಾಡಿದಿರಾ’ ಎಂದು ಬರೆದು ಅಭಿನಂದಿಸಿದ್ದಾರೆ. </p><p>‘ಮನ ಶಂಕರ ವರ ಪ್ರಸಾದ್ ಗಾರು ಚಿತ್ರತಂಡಕ್ಕೆ ಅಭಿನಂದನೆಗಳು. ಬಾಸ್ ಮತ್ತೆ ಬಂದಿದ್ದಾರೆ. ನಮ್ಮ ಮೆಗಾಸ್ಟಾರ್ ಅವರನ್ನು ಪರದೆಯ ಮೇಲೆ ನೋಡಿ ಸಂತೋಷವಾಯಿತು. ಇದು ಕೇವಲ ಸಂಕ್ರಾಂತಿಯ ಬ್ಲಾಕ್ಬಸ್ಟರ್ ಅಲ್ಲ, ಸಂಕ್ರಾಂತಿಯ ಬಾಸ್-ಬಸ್ಟರ್’ ಎಂದು ಬರೆದಿದ್ದಾರೆ.</p><p>ಬಹುದಿನಗಳ ನಂತರ ಚಿರಂಜೀವಿ ಅವರು ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ವರದಿಗಳ ಪ್ರಕಾರ ಸಿನಿಮಾವು ಈ ವರೆಗೆ ₹250 ಕೋಟಿಗೂ ಅಧಿಕ ಗಳಿಕೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>