ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾರುಖ್ ಖಾನ್ 'ಜವಾನ್' ಆಫರ್ ತಿರಸ್ಕರಿಸಿದ ಅಲ್ಲು ಅರ್ಜುನ್: ವರದಿ

Last Updated 2 ಮಾರ್ಚ್ 2023, 12:11 IST
ಅಕ್ಷರ ಗಾತ್ರ

'ಪಠಾಣ್' ಸಿನಿಮಾದ ಭರ್ಜರಿ ಗೆಲುವಿನ ಬಳಿಕ ಬಾಲಿವುಡ್‌ ಬಾದ್‌ಶಾ ಶಾರುಖ್ ಖಾನ್ ಅಭಿನಯಿಸುತ್ತಿರುವ ಮುಂದಿನ ಚಿತ್ರ 'ಜವಾನ್' ಪ್ರಾಜೆಕ್ಟ್‌ನಿಂದ ತೆಲುಗು ನಟ ಅಲ್ಲು ಅರ್ಜುನ್ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಮೂಲಗಳನ್ನು ಉಲ್ಲೇಖಿಸಿ 'ಇಂಡಿಯಾ ಟುಡೇ' ವರದಿ ಮಾಡಿದೆ.

ಜವಾನ್ ಚಿತ್ರದಲ್ಲಿ ಕಿರು ಪಾತ್ರಕ್ಕಾಗಿ ಅಲ್ಲು ಅರ್ಜುನ್‌ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ 'ಪುಷ್ಪ 2' ನಿರ್ಮಾಣದಲ್ಲಿ ಬ್ಯುಸಿ ಆಗಿರುವ ಅಲ್ಲು, ಈ ಆಫರ್ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.

ಇದರೊಂದಿಗೆ ಅಲ್ಲು ಅರ್ಜುನ್‌ಗೆ ಬಾಲಿವುಡ್‌ಗೆ ಎಂಟ್ರಿ ಕೊಡುವ ಅವಕಾಶ ತಪ್ಪಿದೆ.

ಶಾರುಖ್ ನಟನೆಯ ಜವಾನ್ ಚಿತ್ರಕ್ಕೆ ಜನಪ್ರಿಯ ನಿರ್ದೇಶಕ ಅಟ್ಲೀ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ತಮಿಳಿನ ವಿಜಯ್ ಸೇತುಪತಿ ಹಾಗೂ ನಯನತಾರಾ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮತ್ತೊಂದೆಡೆ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿರುವ 'ಪುಷ್ಪ: ದಿ ರೈಸ್' ಸಿನಿಮಾದ ಯಶಸ್ಸಿನ ನಂತರ ಅಲ್ಲು ಅರ್ಜುನ್, 'ಪುಷ್ಪ: ದಿ ರೂಲ್' ಎಂಬ ಶೀರ್ಷಿಕೆಯ ಎರಡನೇ ಭಾಗದ ನಿರ್ಮಾಣದಲ್ಲಿ ತಲ್ಲೀನರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT