<p><strong>ಹೈದರಾಬಾದ್</strong>: ತೆಲುಗು ನಟ ಅಲ್ಲು ಅರ್ಜುನ್ ಅವರ ವಿರುದ್ಧ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮಾಡಿದ ಆರೋಪದ ಬೆನ್ನಲ್ಲೇ, ತಮ್ಮ ಅಭಿಮಾನಿಗಳಿಗೆ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ನಟ ಅಲ್ಲು ಅರ್ಜುನ್ ಮನವಿ ಮಾಡಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ತಮ್ಮ ಅಭಿಮಾನಿಗಳು ಈ ಸಮಯದಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಯಾರ ಬಗ್ಗೆಯೂ ವೈಯಕ್ತಿಕವಾಗಿ ನಿಂದಿಸಬಾರದು ಎಂದು ತಿಳಿಸಿದ್ದಾರೆ.</p>.ಕೊಲೆಯಾದ ವ್ಯಕ್ತಿ ಹಿಂದೂ ಅರ್ಚಕ ಅಲ್ಲ: ಬಾಂಗ್ಲಾ ಸರ್ಕಾರ.ಗಾಜಾ ಪಟ್ಟಿ: ಇಸ್ರೇಲ್ ಸೇನೆ ದಾಳಿಗೆ 20 ಜನರ ಸಾವು. <p>ಅಭಿಮಾನಿಗಳು ತಮ್ಮ ಭಾವನೆಗಳನ್ನು ಜವಾಬ್ದಾರಿಯುತವಾಗಿ ವ್ಯಕ್ತಪಡಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಎಲ್ಲಿಯೂ ಬೇರೆಯವರ ಬಗ್ಗೆ ವೈಯಕ್ತಿಕ ನಿಂದನೆಯ ಹೇಳಿಕೆಗಳನ್ನು ನೀಡಬೇಡಿ ಎಂದು ಸೂಚಿಸಿದ್ದಾರೆ.</p><p>ನಕಲಿ ಐಡಿ ಮತ್ತು ಖಾತೆಗಳ ಮೂಲಕ ತಮ್ಮ ಅಭಿಮಾನಿಯಂತೆ ಬಿಂಬಿಸಿ, ಸುಳ್ಳು ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ವಿಷಯ ಗಮನಕ್ಕೆ ಬಂದಿದ್ದು, ಇಂತಹ ನಕಲಿ ಪೋಸ್ಟ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.</p>.ಪೆಗಾಸಸ್: ‘ಸುಪ್ರೀಂ’ ತನಿಖೆ ನಡೆಸುವುದೇ?; ಸುರ್ಜೇವಾಲಾ .INDW vs WIW: ರೇಣುಕಾಗೆ 5 ವಿಕೆಟ್, ವಿಂಡೀಸ್ ವಿರುದ್ಧ ಭಾರತಕ್ಕೆ 211 ರನ್ ಜಯ. <p>ಪೊಲೀಸರು ಅನುಮತಿ ನಿರಾಕರಿಸಿದರೂ ಚಿತ್ರ ಪ್ರದರ್ಶನದ ವೇಳೆ ನಟ ಅಲ್ಲು ಅರ್ಜುನ್ ಸಂಧ್ಯಾ ಥಿಯೇಟರ್ಗೆ ಭೇಟಿ ನೀಡಿದ್ದರು ಎಂದು ಇತ್ತೀಚೆಗೆ ರೇವಂತ್ ರೆಡ್ಡಿ ಆರೋಪಿಸಿದ್ದರು. ಆದರೆ ಅಲ್ಲು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.</p><p>'ಪುಷ್ಪ-2' ಚಿತ್ರದ ಪ್ರದರ್ಶನದ ವೇಳೆ ನೂಕುನುಗ್ಗಲು ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಘಟನೆಯಲ್ಲಿ ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.</p>.ಭಾರತ ವಿರುದ್ಧ ಏಕದಿನ ಸರಣಿಗೆ ವಿಂಡೀಸ್ ತಂಡ ಪ್ರಕಟ; ಮರಳಿದ ಕೆಮರ್ ರೋಚ್.ಪುಷ್ಪ–2 ಕಾಲ್ತುಳಿತ: ಜನರ ಸುರಕ್ಷತೆಗಿಂತ ಸಿನಿಮಾ ಪ್ರಚಾರ ಹೆಚ್ಚು ಮುಖ್ಯವಲ್ಲ:DGP.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ತೆಲುಗು ನಟ ಅಲ್ಲು ಅರ್ಜುನ್ ಅವರ ವಿರುದ್ಧ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮಾಡಿದ ಆರೋಪದ ಬೆನ್ನಲ್ಲೇ, ತಮ್ಮ ಅಭಿಮಾನಿಗಳಿಗೆ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ನಟ ಅಲ್ಲು ಅರ್ಜುನ್ ಮನವಿ ಮಾಡಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ತಮ್ಮ ಅಭಿಮಾನಿಗಳು ಈ ಸಮಯದಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಯಾರ ಬಗ್ಗೆಯೂ ವೈಯಕ್ತಿಕವಾಗಿ ನಿಂದಿಸಬಾರದು ಎಂದು ತಿಳಿಸಿದ್ದಾರೆ.</p>.ಕೊಲೆಯಾದ ವ್ಯಕ್ತಿ ಹಿಂದೂ ಅರ್ಚಕ ಅಲ್ಲ: ಬಾಂಗ್ಲಾ ಸರ್ಕಾರ.ಗಾಜಾ ಪಟ್ಟಿ: ಇಸ್ರೇಲ್ ಸೇನೆ ದಾಳಿಗೆ 20 ಜನರ ಸಾವು. <p>ಅಭಿಮಾನಿಗಳು ತಮ್ಮ ಭಾವನೆಗಳನ್ನು ಜವಾಬ್ದಾರಿಯುತವಾಗಿ ವ್ಯಕ್ತಪಡಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಎಲ್ಲಿಯೂ ಬೇರೆಯವರ ಬಗ್ಗೆ ವೈಯಕ್ತಿಕ ನಿಂದನೆಯ ಹೇಳಿಕೆಗಳನ್ನು ನೀಡಬೇಡಿ ಎಂದು ಸೂಚಿಸಿದ್ದಾರೆ.</p><p>ನಕಲಿ ಐಡಿ ಮತ್ತು ಖಾತೆಗಳ ಮೂಲಕ ತಮ್ಮ ಅಭಿಮಾನಿಯಂತೆ ಬಿಂಬಿಸಿ, ಸುಳ್ಳು ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ವಿಷಯ ಗಮನಕ್ಕೆ ಬಂದಿದ್ದು, ಇಂತಹ ನಕಲಿ ಪೋಸ್ಟ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.</p>.ಪೆಗಾಸಸ್: ‘ಸುಪ್ರೀಂ’ ತನಿಖೆ ನಡೆಸುವುದೇ?; ಸುರ್ಜೇವಾಲಾ .INDW vs WIW: ರೇಣುಕಾಗೆ 5 ವಿಕೆಟ್, ವಿಂಡೀಸ್ ವಿರುದ್ಧ ಭಾರತಕ್ಕೆ 211 ರನ್ ಜಯ. <p>ಪೊಲೀಸರು ಅನುಮತಿ ನಿರಾಕರಿಸಿದರೂ ಚಿತ್ರ ಪ್ರದರ್ಶನದ ವೇಳೆ ನಟ ಅಲ್ಲು ಅರ್ಜುನ್ ಸಂಧ್ಯಾ ಥಿಯೇಟರ್ಗೆ ಭೇಟಿ ನೀಡಿದ್ದರು ಎಂದು ಇತ್ತೀಚೆಗೆ ರೇವಂತ್ ರೆಡ್ಡಿ ಆರೋಪಿಸಿದ್ದರು. ಆದರೆ ಅಲ್ಲು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.</p><p>'ಪುಷ್ಪ-2' ಚಿತ್ರದ ಪ್ರದರ್ಶನದ ವೇಳೆ ನೂಕುನುಗ್ಗಲು ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಘಟನೆಯಲ್ಲಿ ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.</p>.ಭಾರತ ವಿರುದ್ಧ ಏಕದಿನ ಸರಣಿಗೆ ವಿಂಡೀಸ್ ತಂಡ ಪ್ರಕಟ; ಮರಳಿದ ಕೆಮರ್ ರೋಚ್.ಪುಷ್ಪ–2 ಕಾಲ್ತುಳಿತ: ಜನರ ಸುರಕ್ಷತೆಗಿಂತ ಸಿನಿಮಾ ಪ್ರಚಾರ ಹೆಚ್ಚು ಮುಖ್ಯವಲ್ಲ:DGP.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>