ಪುನೀತ್ ನಿಧನಾನಂತರ ಈ ಹಿಂದೆ ಅಲ್ಲು ಅರ್ಜುನ್ ಅವರು ಬೆಂಗಳೂರಿಗೆ ಪುಷ್ಪ ಸಿನಿಮಾ ಪ್ರಚಾರಕ್ಕೆ ಆಗಮಿಸಿದ್ದರು. ಆದರೆ, ಮನೆಗೆ ಭೇಟಿ ನೀಡಿರಲಿಲ್ಲ. ‘ಪುಷ್ಪ ಪ್ರಚಾರದ ವೇಳೆ ಮನೆಗೆ ಹೋದರೆ ಪ್ರಚಾರ ಪಡೆಯಲು ಈ ರೀತಿ ಮಾಡಿದರು ಎಂಬ ಅಪವಾದಗಳು ಬರುತ್ತವೆಂದು ನಾನು ಮನೆಗೆ ಭೇಟಿ ನೀಡಿಲ್ಲ. ಅದಕ್ಕೋಸ್ಕರ ಮತ್ತೊಮ್ಮೆ ಬೆಂಗಳೂರಿಗೆ ಬರುವೆ’ ಎಂದು ಅಲ್ಲು ಅರ್ಜುನ್ ಹೇಳಿದ್ದರು.