<p>ಇಂದು (ಮೇ 29) ದಿ. ನಟ ಅಂಬರೀಶ್ ಅವರ 74ನೇ ಜನ್ಮದಿನ. ಸುಮಲತಾ ಅವರು ಪತಿ ನೆನೆದು ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. </p><p>ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿರುವ ಪತ್ನಿ ಸುಮಲತಾ, ‘ಅಭಿಮಾನಿಗಳು ಪ್ರೀತಿಯಿಂದ ಕೊಂಡಾಡುವ ‘ರೆಬಲ್ ಸ್ಟಾರ್’ ತನ್ನ ಬಳಿ ಸಹಾಯ ಕೇಳಿ ಬಂದವರನ್ನು ಎಂದಿಗೂ ಬರಿಗೈಯ್ಯಲ್ಲಿ ಕಳುಹಿಸದ ‘ಕಲಿಯುಗದ ಕರ್ಣ’ ಈ ಎರಡೂ ಅಂಕಿತಗಳಿಗೆ ಪ್ರತಿರೂಪವಾಗಿದ್ದ ಅಂಬರೀಶ್ ಅವರ ಬದುಕೇ ಒಂದು ಹಬ್ಬವಾಗಿತ್ತು. ಅವರಲ್ಲಿದ್ದ ಆ ಕರುಣೆ, ಔದಾರ್ಯ, ಸದಾ ಹಸನ್ಮುಖಿ ವ್ಯಕ್ತಿತ್ವ ಮತ್ತು ಜನರ ಮೇಲಿದ್ದ ಪ್ರೀತಿಗೆ ಬೆಲೆ ಕಟ್ಟಲಾಗದು. ಅವರ ಮನಸ್ಸು ಸಮುದ್ರದಷ್ಟೇ ವಿಶಾಲವಾಗಿತ್ತು. ಕಣ್ಣೆದುರು ಬಂದ ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಅಪ್ಪಿಕೊಳ್ಳುವ ದೊಡ್ಡ ಗುಣ ಅವರದ್ದಾಗಿತ್ತು‘ ಎಂದು ಪತಿಯ ಗುಣಗಾನ ಮೆಲುಕು ಹಾಕಿದ್ದಾರೆ.</p><p>‘ಅವರ ಒಡನಾಟ ಸಿಕ್ಕಿದ್ದೇ ನಮ್ಮ ಪುಣ್ಯ ಅಂತ ಅದೆಷ್ಟೋ ಜನ ಇವತ್ತಿಗೂ ಹೆಮ್ಮೆಯಿಂದ ಹೇಳುತ್ತಾರೆ. ಇಂದಿಗೂ ಈ ನಮ್ಮ ಕುಟುಂಬ ಮಾತ್ರವಲ್ಲ, ಕೋಟ್ಯಂತರ ಅಭಿಮಾನಿಗಳು ಅವರನ್ನು ದೇವರಂತೆ ಪೂಜಿಸುತ್ತಿದ್ದಾರೆ. ಅವರ ನೆರಳಲ್ಲಿ ಬೆಳೆದು, ಅವರೊಂದಿಗಿನ ಆಪ್ತ ಕ್ಷಣಗಳನ್ನು ಆನಂದಿಸಿದ ಅದೆಷ್ಟೋ ಆತ್ಮೀಯ ಸ್ನೇಹಿತರು ಇಂದಿಗೂ ಅವರನ್ನ ಸ್ಮರಿಸಿ, ಭಾವುಕರಾಗುತ್ತಾರೆ. ಅವರು ಸಿನಿಮಾ ರಂಗಕ್ಕೆ ಕೊಟ್ಟ ಕೊಡುಗೆ ಮಾತ್ರವಲ್ಲ, ಅಸಂಖ್ಯಾತ ಜನರಿಗೆ ಅವರು ಹಂಚಿದ ಆ ಪ್ರೀತಿ ಮತ್ತು ಬಿಟ್ಟುಹೋದ ಮರೆಯಲಾಗದ ನೆನಪುಗಳು ಅವರನ್ನು ನಮ್ಮ ಹೃದಯದಲ್ಲಿ ಶಾಶ್ವತವಾಗಿ ಜೀವಂತವಾಗಿಟ್ಟಿದೆ’ ಎಂದು ಹೇಳಿಕೊಂಡಿದ್ದಾರೆ. </p><p>‘ನಮ್ಮೆಲ್ಲರ ಮನಸ್ಸಿನಲ್ಲಿ ನೀವು ಸದಾ ಅಮರ. ಅನು ದಿನವೂ, ಅನುಕ್ಷಣವೂ ನಮ್ಮ ಕುಟುಂಬದ ಉಸಿರಾಗಿರುವ ನೀವೆಂದಿಗೂ ನಮ್ಮ ಹೆಮ್ಮೆಯ ‘ರೆಬೆಲ್ ಸ್ಟಾರ್‘ ಎಂದು ಸ್ಮರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇಂದು (ಮೇ 29) ದಿ. ನಟ ಅಂಬರೀಶ್ ಅವರ 74ನೇ ಜನ್ಮದಿನ. ಸುಮಲತಾ ಅವರು ಪತಿ ನೆನೆದು ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. </p><p>ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿರುವ ಪತ್ನಿ ಸುಮಲತಾ, ‘ಅಭಿಮಾನಿಗಳು ಪ್ರೀತಿಯಿಂದ ಕೊಂಡಾಡುವ ‘ರೆಬಲ್ ಸ್ಟಾರ್’ ತನ್ನ ಬಳಿ ಸಹಾಯ ಕೇಳಿ ಬಂದವರನ್ನು ಎಂದಿಗೂ ಬರಿಗೈಯ್ಯಲ್ಲಿ ಕಳುಹಿಸದ ‘ಕಲಿಯುಗದ ಕರ್ಣ’ ಈ ಎರಡೂ ಅಂಕಿತಗಳಿಗೆ ಪ್ರತಿರೂಪವಾಗಿದ್ದ ಅಂಬರೀಶ್ ಅವರ ಬದುಕೇ ಒಂದು ಹಬ್ಬವಾಗಿತ್ತು. ಅವರಲ್ಲಿದ್ದ ಆ ಕರುಣೆ, ಔದಾರ್ಯ, ಸದಾ ಹಸನ್ಮುಖಿ ವ್ಯಕ್ತಿತ್ವ ಮತ್ತು ಜನರ ಮೇಲಿದ್ದ ಪ್ರೀತಿಗೆ ಬೆಲೆ ಕಟ್ಟಲಾಗದು. ಅವರ ಮನಸ್ಸು ಸಮುದ್ರದಷ್ಟೇ ವಿಶಾಲವಾಗಿತ್ತು. ಕಣ್ಣೆದುರು ಬಂದ ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಅಪ್ಪಿಕೊಳ್ಳುವ ದೊಡ್ಡ ಗುಣ ಅವರದ್ದಾಗಿತ್ತು‘ ಎಂದು ಪತಿಯ ಗುಣಗಾನ ಮೆಲುಕು ಹಾಕಿದ್ದಾರೆ.</p><p>‘ಅವರ ಒಡನಾಟ ಸಿಕ್ಕಿದ್ದೇ ನಮ್ಮ ಪುಣ್ಯ ಅಂತ ಅದೆಷ್ಟೋ ಜನ ಇವತ್ತಿಗೂ ಹೆಮ್ಮೆಯಿಂದ ಹೇಳುತ್ತಾರೆ. ಇಂದಿಗೂ ಈ ನಮ್ಮ ಕುಟುಂಬ ಮಾತ್ರವಲ್ಲ, ಕೋಟ್ಯಂತರ ಅಭಿಮಾನಿಗಳು ಅವರನ್ನು ದೇವರಂತೆ ಪೂಜಿಸುತ್ತಿದ್ದಾರೆ. ಅವರ ನೆರಳಲ್ಲಿ ಬೆಳೆದು, ಅವರೊಂದಿಗಿನ ಆಪ್ತ ಕ್ಷಣಗಳನ್ನು ಆನಂದಿಸಿದ ಅದೆಷ್ಟೋ ಆತ್ಮೀಯ ಸ್ನೇಹಿತರು ಇಂದಿಗೂ ಅವರನ್ನ ಸ್ಮರಿಸಿ, ಭಾವುಕರಾಗುತ್ತಾರೆ. ಅವರು ಸಿನಿಮಾ ರಂಗಕ್ಕೆ ಕೊಟ್ಟ ಕೊಡುಗೆ ಮಾತ್ರವಲ್ಲ, ಅಸಂಖ್ಯಾತ ಜನರಿಗೆ ಅವರು ಹಂಚಿದ ಆ ಪ್ರೀತಿ ಮತ್ತು ಬಿಟ್ಟುಹೋದ ಮರೆಯಲಾಗದ ನೆನಪುಗಳು ಅವರನ್ನು ನಮ್ಮ ಹೃದಯದಲ್ಲಿ ಶಾಶ್ವತವಾಗಿ ಜೀವಂತವಾಗಿಟ್ಟಿದೆ’ ಎಂದು ಹೇಳಿಕೊಂಡಿದ್ದಾರೆ. </p><p>‘ನಮ್ಮೆಲ್ಲರ ಮನಸ್ಸಿನಲ್ಲಿ ನೀವು ಸದಾ ಅಮರ. ಅನು ದಿನವೂ, ಅನುಕ್ಷಣವೂ ನಮ್ಮ ಕುಟುಂಬದ ಉಸಿರಾಗಿರುವ ನೀವೆಂದಿಗೂ ನಮ್ಮ ಹೆಮ್ಮೆಯ ‘ರೆಬೆಲ್ ಸ್ಟಾರ್‘ ಎಂದು ಸ್ಮರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>