<p>ನಟ ಅಂಬರೀಶ್ ಅವರು ಅಗಲಿ ಇಂದಿಗೆ ಎರಡು ವರ್ಷ. ಮಂಗಳವಾರ ಬೆಳಿಗ್ಗೆ ಪತ್ನಿ, ಸಂಸದೆ ಸುಮಲತಾ, ಪುತ್ರ ಅಭಿಷೇಕ್ ಅವರು ಅಂಬರೀಶ್ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.</p>.<p>ಸುಮಲತಾ ಅವರು ಇನ್ಸ್ಟಾಗ್ರಾಂನಲ್ಲಿ ದೀರ್ಘ ಬರಹದ ಮೂಲಕ ಅಂಬರೀಶ್ ಅವರನ್ನು ಸ್ಮರಿಸಿದ್ದು ಹೀಗೆ.</p>.<p>‘ನಿಮ್ಮನ್ನು ನೋಡಲು ಕಣ್ಣು ಮುಚ್ಚುತ್ತೇನೆ. ನಿಮ ಧ್ವನಿ ಕೇಳಲು ಕಿವಿಯನ್ನು ಮುಚ್ಚಿಕೊಳ್ಳುತ್ತೇನೆ.ಆದರೆ ನನ್ನ ಹೃದಯವನ್ನು ಮುಚ್ಚಲು ಸಾಧ್ಯವಿಲ್ಲ. ಈ ಅಗಾಧ ಪ್ರೀತಿಯನ್ನು ಹಾಗೂ ನಿಮ್ಮ ನೆನಪುಗಳನ್ನು ಹಿಡಿದಿಟ್ಟುಕೊಳ್ಳುವಹಂಬಲವಿದೆ. ಆದರೆ ಈ ಎಲ್ಲವನ್ನೂ ಹಿಡಿದಿಟ್ಟುಕೊಳ್ಳಲು ಯಾವುದೇ ಹೃದಯಕ್ಕೆ ಸಾಧ್ಯವಿಲ್ಲ. ನಾನು ನಿಮ್ಮೊಂದಿಗೆ ಕಳೆದ ಪ್ರತಿ ಕ್ಷಣವನ್ನೂ ಸದಾ ಸ್ಮರಿಸುತ್ತೇನೆ.ನನ್ನ ಪ್ರತಿ ಉಸಿರಿನಲ್ಲೂ ನೀವು ಇರುತ್ತೀರಿ. ನಿಮ್ಮ ಪ್ರೀತಿಯೇ ನನಗೆ ಶಕ್ತಿ ಹಾಗೂ ಧೈರ್ಯ. ನನ್ನ ಜೀವನದಲ್ಲಿ ಏಳು ಬೀಳು ಕಂಡಾಗ ನನಗೆ ಧೈರ್ಯ ನೀಡುವುದೇ ನಿಮ್ಮ ಪ್ರೀತಿ...'</p>.<p>ಪೂಜೆಯ ವೇಳೆ ನಟರಾದ ದರ್ಶನ್, ಜೈಜಗದೀಶ್, ವಿಜಯಲಕ್ಷ್ಮಿ ಸಿಂಗ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸೇರಿದಂತೆ ಚಿತ್ರರಂಗದ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಟ ಅಂಬರೀಶ್ ಅವರು ಅಗಲಿ ಇಂದಿಗೆ ಎರಡು ವರ್ಷ. ಮಂಗಳವಾರ ಬೆಳಿಗ್ಗೆ ಪತ್ನಿ, ಸಂಸದೆ ಸುಮಲತಾ, ಪುತ್ರ ಅಭಿಷೇಕ್ ಅವರು ಅಂಬರೀಶ್ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.</p>.<p>ಸುಮಲತಾ ಅವರು ಇನ್ಸ್ಟಾಗ್ರಾಂನಲ್ಲಿ ದೀರ್ಘ ಬರಹದ ಮೂಲಕ ಅಂಬರೀಶ್ ಅವರನ್ನು ಸ್ಮರಿಸಿದ್ದು ಹೀಗೆ.</p>.<p>‘ನಿಮ್ಮನ್ನು ನೋಡಲು ಕಣ್ಣು ಮುಚ್ಚುತ್ತೇನೆ. ನಿಮ ಧ್ವನಿ ಕೇಳಲು ಕಿವಿಯನ್ನು ಮುಚ್ಚಿಕೊಳ್ಳುತ್ತೇನೆ.ಆದರೆ ನನ್ನ ಹೃದಯವನ್ನು ಮುಚ್ಚಲು ಸಾಧ್ಯವಿಲ್ಲ. ಈ ಅಗಾಧ ಪ್ರೀತಿಯನ್ನು ಹಾಗೂ ನಿಮ್ಮ ನೆನಪುಗಳನ್ನು ಹಿಡಿದಿಟ್ಟುಕೊಳ್ಳುವಹಂಬಲವಿದೆ. ಆದರೆ ಈ ಎಲ್ಲವನ್ನೂ ಹಿಡಿದಿಟ್ಟುಕೊಳ್ಳಲು ಯಾವುದೇ ಹೃದಯಕ್ಕೆ ಸಾಧ್ಯವಿಲ್ಲ. ನಾನು ನಿಮ್ಮೊಂದಿಗೆ ಕಳೆದ ಪ್ರತಿ ಕ್ಷಣವನ್ನೂ ಸದಾ ಸ್ಮರಿಸುತ್ತೇನೆ.ನನ್ನ ಪ್ರತಿ ಉಸಿರಿನಲ್ಲೂ ನೀವು ಇರುತ್ತೀರಿ. ನಿಮ್ಮ ಪ್ರೀತಿಯೇ ನನಗೆ ಶಕ್ತಿ ಹಾಗೂ ಧೈರ್ಯ. ನನ್ನ ಜೀವನದಲ್ಲಿ ಏಳು ಬೀಳು ಕಂಡಾಗ ನನಗೆ ಧೈರ್ಯ ನೀಡುವುದೇ ನಿಮ್ಮ ಪ್ರೀತಿ...'</p>.<p>ಪೂಜೆಯ ವೇಳೆ ನಟರಾದ ದರ್ಶನ್, ಜೈಜಗದೀಶ್, ವಿಜಯಲಕ್ಷ್ಮಿ ಸಿಂಗ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸೇರಿದಂತೆ ಚಿತ್ರರಂಗದ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>