‘ಕರ್ನಾಟಕದ ರೆಬಲ್ ಸ್ಟಾರ್, ಎಲ್ಲರ ಮನಸ್ಸನ್ನು ಗೆದ್ದಂತಹ ನೇರ ದಿಟ್ಟ ಅಂಬರೀಷ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
‘ರೇಸ್ ಕೋರ್ಸ್ ರಸ್ತೆಯಲ್ಲಿ ಅಂಬರೀಷ್ ಅತಿ ಹೆಚ್ಚು ಓಡಾಡಿದ್ದರು. ಎಲ್ಲ ಅಭಿಮಾನಿಗಳ ಒತ್ತಾಸೆ ಮೇರೆಗೆ ಅವರ ಹೆಸರನ್ನು ಇಟ್ಟಿದ್ದೇವೆ. ರೀಲ್ ಆ್ಯಂಡ್ ರಿಯಲ್ ಲೈಫ್ ಎರಡು ಒಂದೇ ಆಗಿದ್ದ ಅವರದ್ದು ನೇರ ವ್ಯಕ್ತಿತ್ವ. ಕಾವೇರಿ ವಿಚಾರ ಬಂದಾಗ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟವರು. ಅಧಿಕಾರ ಅವರನ್ನು ಹುಡುಕಿಕೊಂಡು ಹೋಗುತ್ತಿತ್ತು’ ಎಂದರು.
ಸಂಸದೆ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಷ್, ನಟ ರಾಘವೇಂದ್ರ ರಾಜ್ ಕುಮಾರ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಚಿನ್ನೇಗೌಡ ಇದ್ದರು.