<p>‘ಸಪ್ತ ಸಾಗರದಾಚೆ ಎಲ್ಲೋ’ ಈ ಹಾಡು ಕಿವಿಗೆ ಬಿದ್ದಾಗ ಮನಸ್ಸಿನಲ್ಲೇ ಪದೇ ಪದೇ ರಿರಿಲೀಸ್ ಆಗುವ ಸಿನಿಮಾ ‘ಅಮೆರಿಕಾ ಅಮೆರಿಕಾ’. ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಈ ಸಿನಿಮಾಕ್ಕೀಗ 30 ವರ್ಷದ ಸಂಭ್ರಮ.</p><p>ಈ ಸಂಭ್ರಮದ ಕ್ಷಣವನ್ನು ನಿರ್ದೇಶಕರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ನೆನಪಿಸಿಕೊಂಡಿದ್ದಾರೆ. ‘ಅಮೆರಿಕಾ ಅಮೆರಿಕಾ’ಚಿತ್ರವು 1997ರ ಏಪ್ರಿಲ್ 11ರಂದು ಬಿಡುಗಡೆಯಾಯಿತು. ಈ ಚಿತ್ರವನ್ನು ನಾನು ರೂಪಿಸಿದ್ದಲ್ಲ; ನನ್ನನ್ನೇ ರೂಪಿಸಿದ ಸಿನಿಮಾ. ಕೋಟಿ ಕೋಟಿ ಕಂಗಳಿಗೆ ಕನಸು ಕೊಟ್ಟ ಚಿತ್ರವಿದು. ಕೋಟಿ ಕೋಟಿ ಮನಗಳಿಗೆ ಮಮಕಾರವಿತ್ತ ಸಿನಿಮಾ. ಈ ಚಿತ್ರವನ್ನು ಗೆಲ್ಲಿಸಿದ ಕನ್ನಡ ಜನತೆಗೆ ಕೋಟಿ ಕೋಟಿ ಕೃತಜ್ಞತೆ‘ ಎಂದ ಅವರು, ಈ ಚಿತ್ರದ ಮುಂದುವರಿದ ಭಾಗ ಸದ್ಯದಲ್ಲೇ ಬರಲಿದೆ ಎಂದು ಸುಳಿವು ನೀಡಿದ್ದಾರೆ. </p>.‘ಜನ ನಾಯಗನ್’ ಸೋರಿಕೆ: ಕೆವಿಎನ್ ಪ್ರೊಡಕ್ಷನ್ಸ್ ಪರವಾಗಿ ನಿಲ್ಲುವೆ ಎಂದ ನಟ ರಿಷಬ್.‘ಕುಂಭಮೇಳ’ದ ಮೊನಾಲಿಸಾ ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು.<p>ನಟಿ ಹೇಮಾ ಪ್ರಭಾತ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಈ ಚಿತ್ರದ ಹಾಡಿನ ಸಾಲು ಹಂಚಿಕೊಂಡು 'ನೆನಪೆಂದರೆ ಮಳೆಬಿಲ್ಲ ಛಾಯೆ' ಎಂದು ಬರೆದುಕೊಂಡಿದ್ದಾರೆ.</p><p>ಚಿತ್ರದಲ್ಲಿ ‘ಸೂರ್ಯ’ನಾಗಿ ರಮೇಶ್, ‘ಭೂಮಿ’ಯಾಗಿ ನಟಿ ಹೇಮಾ ಪ್ರಭಾತ್ ಹಾಗೂ ‘ಶಶಾಂಕ್’ ಪಾತ್ರದಲ್ಲಿ ಅಕ್ಷಯ್ ಆನಂದ್ ಹಾಗೂ ದತ್ತಣ್ಣ, ವೈಶಾಲಿ ಕಾಸರವಳ್ಳಿ ಸೇರಿ ಅನೇಕರು ನಟಿಸಿದ್ದರು. ಇನ್ನೂ, ಈ ಚಿತ್ರದ ‘ನೂರು ಜನ್ಮಕೂ’, ‘ಯಾವ ಮೋಹನ ಮುರಳಿ ಕರೆಯಿತು’, ‘ಬಾನಲ್ಲಿ ಓಡೊ ಮೇಘ’ ಹಾಡುಗಳು ಕನ್ನಡಿಗರ ಮನದಲ್ಲಿ ಹಚ್ಚಹಸಿರಾಗಿ ಉಳಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಸಪ್ತ ಸಾಗರದಾಚೆ ಎಲ್ಲೋ’ ಈ ಹಾಡು ಕಿವಿಗೆ ಬಿದ್ದಾಗ ಮನಸ್ಸಿನಲ್ಲೇ ಪದೇ ಪದೇ ರಿರಿಲೀಸ್ ಆಗುವ ಸಿನಿಮಾ ‘ಅಮೆರಿಕಾ ಅಮೆರಿಕಾ’. ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಈ ಸಿನಿಮಾಕ್ಕೀಗ 30 ವರ್ಷದ ಸಂಭ್ರಮ.</p><p>ಈ ಸಂಭ್ರಮದ ಕ್ಷಣವನ್ನು ನಿರ್ದೇಶಕರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ನೆನಪಿಸಿಕೊಂಡಿದ್ದಾರೆ. ‘ಅಮೆರಿಕಾ ಅಮೆರಿಕಾ’ಚಿತ್ರವು 1997ರ ಏಪ್ರಿಲ್ 11ರಂದು ಬಿಡುಗಡೆಯಾಯಿತು. ಈ ಚಿತ್ರವನ್ನು ನಾನು ರೂಪಿಸಿದ್ದಲ್ಲ; ನನ್ನನ್ನೇ ರೂಪಿಸಿದ ಸಿನಿಮಾ. ಕೋಟಿ ಕೋಟಿ ಕಂಗಳಿಗೆ ಕನಸು ಕೊಟ್ಟ ಚಿತ್ರವಿದು. ಕೋಟಿ ಕೋಟಿ ಮನಗಳಿಗೆ ಮಮಕಾರವಿತ್ತ ಸಿನಿಮಾ. ಈ ಚಿತ್ರವನ್ನು ಗೆಲ್ಲಿಸಿದ ಕನ್ನಡ ಜನತೆಗೆ ಕೋಟಿ ಕೋಟಿ ಕೃತಜ್ಞತೆ‘ ಎಂದ ಅವರು, ಈ ಚಿತ್ರದ ಮುಂದುವರಿದ ಭಾಗ ಸದ್ಯದಲ್ಲೇ ಬರಲಿದೆ ಎಂದು ಸುಳಿವು ನೀಡಿದ್ದಾರೆ. </p>.‘ಜನ ನಾಯಗನ್’ ಸೋರಿಕೆ: ಕೆವಿಎನ್ ಪ್ರೊಡಕ್ಷನ್ಸ್ ಪರವಾಗಿ ನಿಲ್ಲುವೆ ಎಂದ ನಟ ರಿಷಬ್.‘ಕುಂಭಮೇಳ’ದ ಮೊನಾಲಿಸಾ ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು.<p>ನಟಿ ಹೇಮಾ ಪ್ರಭಾತ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಈ ಚಿತ್ರದ ಹಾಡಿನ ಸಾಲು ಹಂಚಿಕೊಂಡು 'ನೆನಪೆಂದರೆ ಮಳೆಬಿಲ್ಲ ಛಾಯೆ' ಎಂದು ಬರೆದುಕೊಂಡಿದ್ದಾರೆ.</p><p>ಚಿತ್ರದಲ್ಲಿ ‘ಸೂರ್ಯ’ನಾಗಿ ರಮೇಶ್, ‘ಭೂಮಿ’ಯಾಗಿ ನಟಿ ಹೇಮಾ ಪ್ರಭಾತ್ ಹಾಗೂ ‘ಶಶಾಂಕ್’ ಪಾತ್ರದಲ್ಲಿ ಅಕ್ಷಯ್ ಆನಂದ್ ಹಾಗೂ ದತ್ತಣ್ಣ, ವೈಶಾಲಿ ಕಾಸರವಳ್ಳಿ ಸೇರಿ ಅನೇಕರು ನಟಿಸಿದ್ದರು. ಇನ್ನೂ, ಈ ಚಿತ್ರದ ‘ನೂರು ಜನ್ಮಕೂ’, ‘ಯಾವ ಮೋಹನ ಮುರಳಿ ಕರೆಯಿತು’, ‘ಬಾನಲ್ಲಿ ಓಡೊ ಮೇಘ’ ಹಾಡುಗಳು ಕನ್ನಡಿಗರ ಮನದಲ್ಲಿ ಹಚ್ಚಹಸಿರಾಗಿ ಉಳಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>